ತಿರುಪತಿ : ಸಾಮಾಜಿಕ ಕಾರ್ಯಗಳ ಮೂಲಕ ಜನರ ಮೆಚ್ಚುಗೆ ಪಡೆದಿರುವ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ (Infosys Sudha Murty ಅವರು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ (TTD) ಸುಮಾರು 42 ಲಕ್ಷ ವೆಚ್ಚದ ಧರ್ಮ ರಥ ವಾಹನವನ್ನು (Dharma Ratha) ಕೊಡುಗೆಯಾಗಿ ನೀಡಿದ್ದಾರೆ.)
ತಿರುಪತಿ ವೆಂಕಟೇಶ್ವರ ದೇವರಿಗೆ ಭಕ್ತರು ಚಿನ್ನ, ವಜ್ರ ವೈಡೂರ್ಯಗಳನ್ನು ದೇಣಿಗೆ ರೂಪದಲ್ಲಿ ನೀಡುವುದು ಸರ್ವೇ ಸಾಮಾನ್ಯ. ಆದ್ರೀಗ ಸುಧಾಮೂರ್ತಿ ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸುಮಾರು 42 ಲಕ್ಷ ವೆಚ್ಚದ ಧರ್ಮರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ. ಸುಧಾಮೂರ್ತಿ ಅವರ ಧಾರ್ಮಿಕ ಕಾರ್ಯಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಉಪಸ್ಥಿತರಿದ್ದರು. ಈ ಧರ್ಮರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನವನ್ನು ನೀಡಲಿದೆಯಂತೆ. ಕಳೆದ ಹಲವು ದಶಕಗಳಿಂದ ಶಾಲೆಗಳ ಉನ್ನತೀಕರಣ, ದತ್ತು ಪ್ರಕ್ರಿಯೆ ಸೇರಿದಂತೆ ಹಲವು ರೀತಿಯಲ್ಲಿ ಸಮಾಜಮುಖಿ ಕೆಲಸ ಮಾಡಿರುವ ಸುಧಾಮೂರ್ತಿಯವರು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲೂ ಹಲವು ರೀತಿಯಲ್ಲಿ ಸಹಾಯ, ಸಹಕಾರ ಮಾಡಿದ್ದಾರೆ.
ಪ್ರವಾಹ, ಮಳೆಹಾನಿ ಸೇರಿದಂತೆ ಹಲವು ಸಂದರ್ಭಗಳಲ್ಲಿಯೂ ಸುಧಾಮೂರ್ತಿ ಅವರು ಕರುನಾಡಿನ ಜನರಿಗೆ ನೆರವಾಗಿದ್ದಾರೆ. ಶಿಕ್ಷಣ, ಆರೋಗ್ಯ, ಸಾಮಾಜಿಕ ಕಳಕಳಿಯ ಕಾರ್ಯದಲ್ಲಿಯೂ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸುಧಾಮೂರ್ತಿ ಅವರು ತಿರುಪತಿ ತಿರುಮಲ ದೇವಸ್ಥಾನದ ಜೊತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದು, ಹಲವು ವರ್ಷಗಳಿಂದಲೂ ಆಗಾಗ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇದ್ದಾರೆ. ಇಸ್ಪೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ತಮ್ಮನ್ನು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಭಾರತೀಯ ಸೇನೆಗೂ ಕೂಡ ನೂರಾರು ಕೋಟಿ ರೂಪಾಯಿ ನೆರವು ನೀಡುವ ಕಾರ್ಯವನ್ನು ಮಾಡಿದ್ದಾರೆ.
ಇದನ್ನೂ ಓದಿ : Covid-19 precautionary dose : ಕೋವಿಡ್ 19 ಬೂಸ್ಟರ್ ಡೋಸ್ ನಡುವಿನ ಅಂತರ ಇಳಿಕೆ ಮಾಡಿದ ಕೇಂದ್ರ
ಇದನ್ನೂ ಓದಿ : Rajya Sabha Nominees : ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಇಳಯರಾಜ ಆಯ್ಕೆ
Infosys Sudha Murty donated 42 lakh worth of Dharma Ratha to Tirupati Temple
Comments are closed.