ಮಹಾರಾಷ್ಟ್ರ : Maharashtra on high alert : ರಾಯಗಢ ಜಿಲ್ಲೆಗೆ ಕಳ್ಳ ಸಾಗಣೆ ಮಾಡಲಾಗುತ್ತಿದ್ದ ಎಕೆ 47 ರೈಫಲ್ಗಳನ್ನು ಹೊಂದಿದ್ದ ದೋಣಿಯನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದು ಮಹಾರಾಷ್ಟ್ರದಲ್ಲಿ ಇಂದು ಹೈ ಅಲರ್ಟ್ ಘೋಷಣೆಯಾಗಿದೆ ಎಂದು ವರದಿಯಾಗಿದೆ. ಈ ಘಟನೆಯ ಬಳಿಕ ರಾಯಗಢ ಜಿಲ್ಲೆಯಲ್ಲಿ ಸಂಪೂರ್ಣ ನೌಕಾ ಮಾರ್ಗಗಳನ್ನು ಬಂದ್ ಮಾಡಲಾಗಿದೆ.
ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವರದಿಯ ಪ್ರಕಾರ ಸಂಬಂಧಪಟ್ಟ ರಾಯಗಡದ ಹರಿಹರೇಶ್ವರ ಬೀಚ್ ಸಮೀಪದಲ್ಲಿದ್ದ ದೋಣಿಯನ್ನು ದಡಕ್ಕೆ ತೆಗೆದುಕೊಂಡು ಬರಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ರಾಯಗಢ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ದುಧೆ ಹಾಗೂ ಇತರೆ ಹಿರಿಯ ಅಧಿಕಾರಿಗಳು ದೋಣಿಯ ಶೋಧ ಕಾರ್ಯವನ್ನು ನಡೆಸಿದ್ದಾರೆ. ದೋಣಿಯಲ್ಲಿ ಮೂರು ಎಕೆ 47 ರೈಫಲ್ಗಳು ಹಾಗೂ ಕೆಲವು ಬುಲೆಟ್ಗಳು ಪತ್ತೆಯಾಗಿದೆ. ಪೊಲೀಸರು ಈ ಸಂಬಂಧ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಯಗಢದ ಹರಿಹರೇಶ್ವರ ಹಾಗೂ ಶ್ರೀವರ್ಧನ್ನ ಭಾರರ್ಖೋಲ್ನಲ್ಲಿ ಶಸ್ತ್ರಾಸ್ತ್ರಗಳು ಹಾಗೂ ದಾಖಲೆಗಳನ್ನು ಹೊಂದಿರುವ ಕೆಲವು ದೋಣಿಗಳು ಪತ್ತೆಯಾಗಿವೆ. ಸ್ಥಳೀಯ ಪೊಲೀಸರು ಈ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ. ಎಟಿಎಸ್ ಅಥವಾ ರಾಜ್ಯ ಎಜೆನ್ಸಿಯ ವಿಶೇಷ ತಂಡವನ್ನು ತುರ್ತಾಗಿ ನೇಮಕ ಮಾಡುವಂತೆ ನಾನು ಸಿಎಂ ಹಾಗೂ ಡಿಸಿಎಂನ್ನು ಒತ್ತಾಯಿಸಿದ್ದೇನೆಂದು ಶಾಸಕರಾದ ಅಧಿರಿ ತಟ್ಕರೆ ಹಾಗೂ ಶ್ರೀವರ್ಧನ್ ಹೇಳಿದರು.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಈ ವರ್ಷದ ಜೂನ್ ತಿಂಗಳಲ್ಲಿ ಕರಾವಳಿಯಲ್ಲಿ ಬಳಿಯಲ್ಲಿ ಈ ದೋಣಿಯಲ್ಲಿದ್ದ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಇದೀಗ ದೋಣಿಯಲ್ಲಿ ರೈಫಲ್ಗಳು ಪತ್ತೆಯಾಗುತ್ತಿದ್ದಂತೆಯೇ ರಾಯಗಢ ಜಿಲ್ಲೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಸುಳಿವು ಪತ್ತೆಗಾಗಿ ಪೊಲೀಸರು ಸ್ಥಳೀಯರು ಹಾಗೂ ಮೀನುಗಾರರನ್ನು ವಿಚಾರಣೆಗೊಳಪಡಿಸುತ್ತಿದ್ದಾರೆ.
ಇದನ್ನು ಓದಿ : KKR Head Coach Chandrakant Pandit : ಕೋಲ್ಕತಾ ನೈಟ್ ರೈಡರ್ಸ್ಗೆ ರಣಜಿ ಹೀರೋ ಚಂದ್ರಕಾಂತ್ ಪಂಡಿತ್ ಹೆಡ್ ಕೋಚ್
ಇದನ್ನೂ ಓದಿ : KKR Head Coach Chandrakant Pandit : ಕೋಲ್ಕತಾ ನೈಟ್ ರೈಡರ್ಸ್ಗೆ ರಣಜಿ ಹೀರೋ ಚಂದ್ರಕಾಂತ್ ಪಂಡಿತ್ ಹೆಡ್ ಕೋಚ್
Maharashtra on high alert after suspected terror boat found in Raigad, officials claim no security threat
Comments are closed.