Harjinder Singh : ಸೇನಾ ಹೆಲಿಕಾಪ್ಟರ್ ಪತನ: ಕನ್ನಡತಿಯನ್ನೇ ವರಿಸಿದ್ದರು ಹುತಾತ್ಮ ಲೆ.ಕ.ಹರ್ಜಿಂದರ್ ಸಿಂಗ್
ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ದಾಳಿ ಹಿಂದಿನ ಮಾಸ್ಟರ್ ಮೈಂಡ್, ಭಾರತೀಯ ಮೂರು ಸೇನೆಗಳ ನಾಯಕ, ವೀರ ಸೇನಾನಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ತಮಿಳುನಾಡಿನ ಕುನೂರ್ನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿದ್ದಾರೆ. ಬರೋಬ್ಬರಿ ನಾಲ್ಕು ದಶಕಗಳಿಂದ ಸೇನೆಗೆ ಸೇವೆ ಸಲ್ಲಿಸಿದ್ದ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಕೂಡ ಇದೇ ದುರಂತದಲ್ಲಿ ಜೀವ ತೆತ್ತಿದ್ದಾರೆ. ಇನ್ನು ದುರಂತದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಲೆಫ್ಟಿನಂಟ್ ಕರ್ನಲ್ ಹರ್ಜಿಂದರ್ ಸಿಂಗ್ (Lt col Harjinder Singh) ಮೃತಪಟ್ಟಿದ್ದಾರೆ.
ಹೆಲಿಕಾಪ್ಟರ್ನಲ್ಲಿ ಒಟ್ಟು 14 ಮಂದಿ ಇದ್ದರು ಎನ್ನಲಾಗಿದ್ದು ಇದರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ ನೀಡಿದೆ. ಮೃತರನ್ನು ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಸಿಡಿಎಸ್ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್ ಲಖ್ಬಿಂದರ್ ಸಿಂಗ್ ಲಿಡ್ಡೆರ್, ಲೆ.ಕ ಹರ್ಜಿಂದರ್ ಸಿಂಗ್, ವಿಂಗ್ ಕಮಾಂಡರ್ ಪಿಎಸ್ ಚವ್ಹಾಣ್, ಸ್ಕ್ವಾಡ್ರನ್ ಲೀಡರ್ ಕೆ ಸಿಂಗ್, ಜೆಡಬ್ಲು ಓ ಪ್ರದೀಪ್, ಜೆಡಬ್ಲುಓ ದಾಸ್, ನಾಯಕ್ ಬಿ ಸಾಯಿ ತೇಜ, ಸತ್ಪಾಲ್, ನಾಯಕ್ ವಿವೇಕ ಕುಮಾರ್, ನಾಯಕ್ ಗುರುಸೇವಕ್ ಸಿಂಗ್ ಎಂದು ಗುರುತಿಸಲಾಗಿದೆ.
ಕುನೂರ್ನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಲೆಫ್ಟಿನಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಸಾಲ್ಮರ ಎಂಬಲ್ಲಿನ ನಿವಾಸಿ ಪ್ರಫುಲ್ಲ ಎಂಬವರನ್ನು ವಿವಾಹ ವಾಗಿದ್ದರು. ಸೇನೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಫುಲ್ಲಾ ಹಾಗೂ ಹರ್ಜಿಂದರ್ ಸಿಂಗ್ ಪರಸ್ಪರ ಒಬ್ಬರೊನ್ನಬ್ಬರು ಪ್ರೀತಿಸಿ ಬಳಿಕ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು ಎನ್ನಲಾಗಿದೆ.
ನಿನ್ನೆ ನಡೆದ ಸೇನಾ ಹೆಲಿಕಾಪ್ಟರ್ನಲ್ಲಿ ಹರ್ಜಿಂದರ್ ಸಿಂಗ್ ಮೃತಪಟ್ಟಿದ್ದಾರೆ ಎಂಬ ಸುದ್ದಿ ಕೇಳುತ್ತಿದ್ದಂತೆಯೇ ಕಾರ್ಕಳದ ಮಿನೇಜಸ್ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ. ಮೃತ ಹರ್ಜಿಂದರ್ ಸಿಂಗ್ರನ್ನು ನೆನೆದು ಪ್ರಫುಲ್ಲಾ ತಾಯಿ ಮೇರಿ, ಅಕ್ಕ – ಬಾವ ಸೇರಿದಂತೆ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಸಿಡಿಎಸ್ ಜನರಲ್ ಬಿಪಿನ್ ರಾವತ್ ವೆಲ್ಲಿಂಗ್ಟನ್ನಲ್ಲಿರುವ ರಕ್ಷಣಾ ಸೇವೆಗಳ ಸಿಬ್ಬಂದಿಗೆ ಕಾಲೇಜಿಗೆ ನಿಗದಿತ ಭೇಟಿಗೆ ತೆರಳುತ್ತಿದ್ದರು. ವಾಯುಪಡೆಯ ಎಂಐ 17 ವಿ5 ಹೆಲಿಕಾಪ್ಟರ್ ನಿನ್ನೆ ಬೆಳಗ್ಗೆ 11.48ರ ಸುಮಾರಿಗೆ ಸೂಲೂರು ಏರ್ಬೇಸ್ನಿಂದ ಟೇಕಾಫ್ ಆಗಿತ್ತು. ಮಧ್ಯಾಗ್ನ 12:15ರ ಸುಮಾರಿಗೆ ವೆಲ್ಲಿಂಗ್ಟನ್ನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಸುಮಾರು 12:08ರ ಸುಮಾರಿಗೆ ಸುಲೂರು ವಾಯುನೆಲೆಯಲ್ಲಿದ್ದ ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟ್ರೋಲ್ನೊಂದಿಗೆ ಸಂಪರ್ಕವನ್ನು ಕಳೆದುಕೊಂಡಿತ್ತು. ಕುನೂರ್ ಎಂಬಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು. ಕಾಡಿನಲ್ಲಿ ಬೆಂಕಿಯನ್ನು ಕಂಡ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಅಲ್ಲಿ ಮಿಲಿಟರಿ ಹೆಲಿಕಾಪ್ಟರ್ನ ಅವಶೇಷಗಳನ್ನು ಗಮನಿಸಿದ್ದಾರೆ. ಕೂಡಲೇ ಹೆಲಿಕಾಪ್ಟರ್ನಲ್ಲಿದ್ದವರನ್ನು ರಕ್ಷಿಸಲು ಕಾರ್ಯಾಚರಣೆ ಆರಂಭವಾಗಿತ್ತು. ಬದುಕುಳಿದವರನ್ನು ಕೂಡಲೇ ಆಸ್ಪತ್ರೆಗೂ ದಾಖಲಿಸಲಾಗಿತ್ತು
ದುರಂತದಲ್ಲಿ ಗಾಯಗೊಂಡಿದ್ದವರನ್ನು ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಲಿಕಾಪ್ಟರ್ನಲ್ಲಿದ್ದ 14 ಮಂದಿಯಲ್ಲಿ 13 ಮಂದಿ ದುರ್ಮರಣಕ್ಕೆ ಈಡಾಗಿದ್ದಾರೆ. ಮೃತರನ್ನು ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಸಿಡಿಎಸ್ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್ ಲಖ್ಬಿಂದರ್ ಸಿಂಗ್ ಲಿಡ್ಡೆರ್, ಲೆ.ಕ ಹರ್ಜಿಂದರ್ ಸಿಂಗ್, ವಿಂಗ್ ಕಮಾಂಡರ್ ಪಿಎಸ್ ಚವ್ಹಾಣ್, ಸ್ಕ್ವಾಡ್ರನ್ ಲೀಡರ್ ಕೆ ಸಿಂಗ್, ಜೆಡಬ್ಲು ಓ ಪ್ರದೀಪ್, ಜೆಡಬ್ಲುಓ ದಾಸ್, ನಾಯಕ್ ಬಿ ಸಾಯಿ ತೇಜ, ಸತ್ಪಾಲ್, ನಾಯಕ್ ವಿವೇಕ ಕುಮಾರ್, ನಾಯಕ್ ಗುರುಸೇವಕ್ ಸಿಂಗ್ ಎಂದು ಗುರುತಿಸಲಾಗಿದೆ
ಇದನ್ನು ಓದಿ : Rajnath Singh : ಜೀವನ್ಮರಣ ಹೋರಾಟದಲ್ಲಿ ಕ್ಯಾಪ್ಟನ್ ವರುಣ್ ಸಿಂಗ್: ಸಂಸತ್ತಿಗೆ ರಾಜನಾಥ್ ಸಿಂಗ್ ಮಾಹಿತಿ ಇದನ್ನೂ ಓದಿ :Black box : ತಮಿಳುನಾಡಿನಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್ನ ಬ್ಲ್ಯಾಕ್ ಬಾಕ್ಸ್ ಪತ್ತೆ
Martyr Lieutenant Colonel Harjinder Singh was married to the woman of Udupi
Comments are closed.