ನವದೆಹಲಿ : ಶತಮಾನದಲ್ಲಿಯೇ ಕೊರೊನಾ ವೈರಸ್ ದೇಶ ಕಂಡ ಭೀಕರ ಸಾಂಕ್ರಾಮಿಕ ರೋಗ. ಈ ವೈರಸ್ ವಿರುದ್ದ ಇಡೀ ದೇಶವೇ ಹೋರಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ʼಮನ್ ಕೀ ಬಾತ್ʼ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವೈದ್ಯರು, ನರ್ಸ್ ಸೇರಿದಂತೆ ಆರೋಗ್ಯ ಸಿಬ್ಬಂಧಿಗಳು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ ಎಂದರು.
ಆಕ್ಸಿಜನ್ ಕೊರತೆಯಿಂದ ಜನರು ಸಾಯುವ ಸ್ಥಿತಿ ಎದುರಾದಾಗ, ವಿದೇಶಗಳಿಂದಲೂ ಆಕ್ಸಿಜನ್ ಪೂರೈಕೆ ಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ಆಕ್ಸಿಜನ್ ರೈಲನ್ನು ಚಲಾಯಿಸಿದ್ದು ದೇಶದ ಹೆಮ್ಮೆ ಎಂದು ಮಹಿಳಾ ಲೋಕೋಪೈಲಟ್ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.