Sandhya suicide : ಮನೆಯವರ ಬಲವಂತ, ಮದುವೆಯಾದ ನಾಲ್ಕೇ ದಿನಕ್ಕೆ ವಧು ಆತ್ಮಹತ್ಯೆ

ಚೆನ್ನೈ : ತನಗೆ ಇಷ್ಟವಿಲ್ಲದಿದ್ದರೂ ಮನೆಯವರ ಬಲವಂತಕ್ಕೆ ಮದುವೆಯಾಗಿದ್ದ ನವ ವಿವಾಹಿತೆಯೋರ್ವಳು (Sandhya suicide) ನಾಲ್ಕೇ ದಿನಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಚೆನ್ನೈನ ಅಂಬತ್ತೂರು ಸಮೀಪದ ಕೊರಟ್ಟೂರಿನಲ್ಲಿ ನಡೆದಿದೆ.

ಚೆನ್ನೈನ ಕೊಟ್ಟೂರು ನಿವಾಸಿ ಸಂಧ್ಯಾ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಬಿಕಾಂ ವಿದ್ಯಾರ್ಥಿನಿಯಾಗಿದ್ದ ಸಂಧ್ಯಾಳನ್ನು (Sandhya suicide)ಮಾರ್ಚ್ 4ರಂದು ಸೇಲಂನಲ್ಲಿ ರಾಜಾ ಅವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆಯಾದ ನಾಲ್ಕನೇ ದಿನಕ್ಕೆ ಸಂಧ್ಯಾ ತನ್ನ ತವರು ಮನೆಯಾಗಿರುವ ಕೊರಟ್ಟೂರಿಗೆ ಗಂಡನ ಜೊತೆಗೆ ಬಂದಿದ್ದಳು. ಆದರೆ ಮಾ.7ರಂದು ಸಂಧ್ಯಾ (Sandhya suicide) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.

ಕೂಡಲೇ ಸಂಧ್ಯಾಳನ್ನು (Sandhya suicide) ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರು ಪೊಲೀಸರು ತನಿಖೆ ನಡೆಸಿದ್ದು, ಪೊಲೀಸರ ತನಿಖೆಯಲ್ಲಿ ಬಲವಂತದ ಮದುವೆಯಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಭಾರತೀಯ ಸೇನೆಯ ಹೆಲಿಕಾಫ್ಟರ್‌ ಪತನ

ಅನಾರೋಗ್ಯದಿಂದ ಬಳಲುತ್ತಿದ್ದ ಬಿಎಸ್‌ಎಫ್‌ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್‌ ಪತನವಾಗಿದೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಪತನಗೊಂಡಿದೆ. ಉತ್ತರ ಕಾಶ್ಮೀರದ ಇಲ್ಲಿಂದ 200 ಕಿಮೀ ದೂರದಲ್ಲಿರುವ ತುಲೈಲ್‌ನ ಗುಜ್ರಾನ್ ನಲ್ಲಾಹ್ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಟೇಕ್‌ ಆಫ್‌ ಆದ ತಕ್ಷಣ ಅಪಘಾತ ಸಂಭವಿಸಿದೆ. ಈ ಪ್ರದೇಶವು ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ ಬಳಿ ಇದೆ. ಬಿಎಸ್‌ಎಫ್‌ ಯೋಧರನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದ್ದು, ಸಾವು ನೋವಿನ ಕುರಿತು ವರದಿಯಾಗಿಲ್ಲ.

ಗುರೆಜ್ ಕಣಿವೆಯ ಗುಜ್ರಾನ್ ನಲ್ಲಾ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆದರೆ ಪೈಲಟ್ ಮತ್ತು ಸಹ-ಪೈಲಟ್ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೂ ಪೈಲಟ್ ಮತ್ತು ಸಹ-ಪೈಲಟ್ ಸುರಕ್ಷಿತವಾಗಿ ಎಜೆಕ್ಟ್ ಆಗಿದ್ದಾರೆ ಎಂದು ನಂಬಲಾಗಿದೆ. ಗುರೆಜ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಇಂಡಿಯಾ ಟುಡೇ ಟಿವಿಗೆ ಆರ್ಮಿ ಹೆಲಿಕಾಪ್ಟರ್‌ನೊಂದಿಗೆ ಸಂವಹನ ಕಳೆದುಕೊಂಡಿದೆ ಎಂದು ಹೇಳಿದರು. ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಎಂದು ಅಧಿಕಾರಿತಗಳು ತಿಳಿಸಿರುವ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ : ವಿದೇಶಕ್ಕೆ ತೆರಳುವುದಾಗಿ ಹೇಳಿದ್ದ ಆರ್ಕಿಟೆಕ್ಟ್ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ

ಇದನ್ನೂ ಓದಿ : 100 ರೂಪಾಯಿ ಸಾಲ ವಾಪಸ್​ ಕೊಟ್ಟಿಲ್ಲವೆಂದು ಸ್ನೇಹಿತನನ್ನೇ ಕೊಂದ ಭೂಪ ಅರೆಸ್ಟ್​

( Newly married woman Sandhya suicide in Chennai )

Comments are closed.