ಮಹಾರಾಷ್ಟ್ರ : Petrol will be banned : ಪೆಟ್ರೋಲ್ ಹಾಗೂ ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದ್ದು ಇದು ವಾಹನ ಸವಾರರ ನಿದ್ದೆಗೆಡಿಸಿದೆ. ಗಗನಕ್ಕೇರುತ್ತಿರುವ ಪೆಟ್ರೋಲ್ನ ಬೆಲೆಯಿಂದಾಗಿ ಅನೇಕರು ಸಾರ್ವಜನಿಕ ಸಾರಿಗೆಯತ್ತ ಮುಖ ಮಾಡಿದ್ದರೆ ಇನ್ನೂ ಹಲವರು ಎಲೆಕ್ಟ್ರಿಕ್ ಬೈಕ್ಗಳನ್ನು ಖರೀದಿ ಮಾಡಿದ್ದಾರೆ. ಈ ಎಲ್ಲದರ ನಡುವೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ದೇಶದಲ್ಲಿ ಪೆಟ್ರೋಲ್ ನಿಷೇಧಗೊಳಿಸುವ ಬಗ್ಗೆ ಸೂಚನೆಯನ್ನು ನೀಡಿದ್ದಾರೆ.
ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿ ಡಾ. ಪಂಜಾಬ್ರಾವ್ ದೇಶ್ಮುಖ್ ಕೃಷಿ ವಿಶ್ವ ವಿದ್ಯಾಲಯದಲ್ಲಿ ನಡೆದ 36ನೇ ಘಟಿಕೋತ್ಸವದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ ಮಾಡಲಾಯ್ತು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ನಮ್ಮ ದೇಶದ ರೈತರು ಕೇವಲ ಅಕ್ಕಿ , ಗೋಧಿ ಹಾಗೂ ಜೋಳದ ಇಳುವರಿಯನ್ನೇ ಮಾಡುತ್ತಿದ್ದರೆ ಅವರು ಭವಿಷ್ಯದಲ್ಲಿಯೂ ಮುಂದೆ ಬರಲು ಸಾಧ್ಯವಿಲ್ಲ. ರೈತರು ಕೇವಲ ಆಹಾರ ಪೂರೈಕೆದಾರರು ಮಾತ್ರ ಆಗದೇ ಇಂಧನ ಪೂರೈಕೆದಾರರೂ ಆಗಬೇಕು ಎಂದು ಕರೆ ನೀಡಿದರು.
ಅಲ್ಲದೇ ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ಜೈವಿಕ ಎಥೆನಾಲ್ಗಳನ್ನು ತಯಾರಿಸಲಾಗುತ್ತಿದೆ. ಇದನ್ನು ವಾಹನಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಆಳವಾದ ಬಾವಿಯ ನೀರಿನಿಂದ ಹಸಿರು ಹೈಡ್ರೋಜನ್ ತಯಾರಿಸಬಹುದು. ಇದನ್ನು ಕೆಜಿಗೆ 70 ರೂಪಾಯಿಗಳಂತೆ ಮಾರಾಟ ಕೂಡ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್ ಖಾಲಿಯಾಗಲಿದೆ. ಹೀಗಾಗಿ ದೇಶದಲ್ಲಿ ನಾವು ಪಳೆಯುಳಿಕೆ ಇಂಧನಗಳನ್ನು ನಿಷೇಧ ಮಾಡುವ ದಿನ ಹೆಚ್ಚು ದೂರವಿಲ್ಲ ಎಂದು ಹೇಳಿದ್ದಾರೆ.
ಡಾ. ಪಂಜಾಬ್ರಾವ್ ದೇಶ್ಮುಖ್ ಕೃಷಿ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಉಪಕುಲಪತಿ ಡಾ.ಮೋತಿಲಾಲ್ ಮದನ್, ಕುಲಸಚಿವ ಡಾ.ವಿಲಾಸ್ ಭಾಲೆ, ಕುಲಸಚಿವರು, ಅಧ್ಯಾಪಕರು, ಪ್ರಾಧ್ಯಾಪಕರು, ಶಿಕ್ಷಕರು ಹಾಗೂ ಪದವೀಧರ ವಿದ್ಯಾರ್ಥಿಗಳು ಕೂಡ ಹಾಜರಿದ್ದರು.
ಇದನ್ನು ಓದಿ : Boris Johnson resigns : ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ
ಇದನ್ನೂ ಓದಿ : Vikram Admitted To Hospital : ತಮಿಳು ನಟ ವಿಕ್ರಮ್ ಆರೋಗ್ಯದಲ್ಲಿ ಹೃದಯಾಘಾತ: ಆಸ್ಪತ್ರೆಗೆ ದಾಖಲು
Nitin Gadkari’s big claim on petrol ban! Says Petrol will be banned in India in the next 5 years
Comments are closed.