ದೇಶದ ಜನರಿಗೆ ಗುಡ್ ನ್ಯೂಸ್ ಕೊಡ್ತಾರಾ ಮೋದಿ : ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ

ನವದೆಹಲಿ : ದೇಶ ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿ, ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ನಡುವಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಭಾಷಣ ಇದೀಗ ಕುತೂಹಲ ಮೂಡಿಸಿದೆ.

ಕೊರೊನಾ ಎರಡನೇ ಅಲೆಯ ಸಂಕಷ್ಟದ ನಡುವಲ್ಲೇ ಭಾರತ ಮೂರನೇ ಅಲೆಯ ಆತಂಕವನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿಂದು ಪ್ರಧಾನಿ ಮೋದಿ ಅವರ ಭಾಷಣ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ರಾಜ್ಯಗಳಲ್ಲಿ ಲಾಕ್ ಡೌನ್ ಹೇರಿಕೆಯಾಗಿದೆ. ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಮೋದಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಇನ್ನೊಂದೆಡೆ ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ದೇಶದ ಜನತೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತು ಮೋದಿ ಮಾತನಾಡುವ ಸಾಧ್ಯತೆಯಿದೆ. ಅದ್ರಲ್ಲೂ ಮಕ್ಕಳನ್ನೇ ಹೆಚ್ಚಾಗಿ ಸೋಂಕು ಕಾಡುವ ಭೀತಿಯಿರೋದ್ರಿಂದಾಗಿ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

Comments are closed.