ಕೋಲ್ಕತ್ತಾ : ಚುನಾವಣಾ ಪ್ರಚಾರದ ವೇಳೆಯಲ್ಲಿ ಬಂಗಾಳ ಬಿಜೆಪಿ ನಾಯಕ ದಿಲೀಪ್ ಘೋಷ್ ಅವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಮಂದಿಯನ್ನು ಬಂಧಿಸಿದ್ದಾರೆ.
ಕೋಲ್ಕತ್ತಾ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಭವಾನಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆಯಲ್ಲಿ ದಿಲೀಪ್ ಘೋಷ್ ಅವರ ಮೇಳೆ ಹಲ್ಲ ನಡೆದಿತ್ತು.
ಇದನ್ನೂ ಓದಿ:JDS : ಚುನಾವಣೆಗೆ ಸಜ್ಜಾಗುತ್ತಿದೆ ಜೆಡಿಎಸ್ : ಪಕ್ಷ ಸಂಘಟನಾ ಕಾರ್ಯಾಗಾರಕ್ಕೆ ಎಚ್ಡಿಡಿ ಚಾಲನೆ
ಈ ಕುರಿತು ಭವಾನಿಪೂರ್ ಪೊಲೀಸ್ ಠಾಣೆಯಲ್ಲಿ ಕಾನೂನು ಬಾಹಿರವಾಗಿ ಸಭೆ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು ಇದೀಗ, 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
(8 arrested over attack on BJP leader Dilip Ghosh)