ಮಂಗಳವಾರ, ಜೂನ್ 17, 2025
HomeBreakingಕೊರೊನಾದಿಂದ ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ನಿಧನ

ಕೊರೊನಾದಿಂದ ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ನಿಧನ

- Advertisement -

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದಾಗಿ ಚಿತ್ರನಟ, ಹಿರಿಯ ಪತ್ರಕರ್ತ ಸುರೇಶ್ ಚಂದ್ರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಹಲವು ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಚಂದ್ರ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮೃತರ ಅಂತ್ಯಕ್ರೀಯೆ ಮಧುಗಿರಿಯ ಲಿಂಗೇನಹಳ್ಳಿಯಲ್ಲಿ ನಡೆಯಲಿದೆ.

ಸುರೇಶ್ ಚಂದ್ರ ಅವರು ಪತ್ರಕರ್ತರಾಗಿ ಸಂಜೆವಾಣಿ ಪತ್ರಿಕೆಯಲ್ಲಿ ಸುದೀರ್ಘ ಅವಧಿಯವರೆಗೆ ಸೇವೆ ಸಲ್ಲಿಸಿದ್ದು, ಕಳೆದ ವರ್ಷ ವಷ್ಟೇ ಪತ್ರಿಕೋದ್ಯಮದಿಂದ ನಿವೃತ್ತರಾಗಿದ್ದರು. ಚಿತ್ರರಂಗದಲ್ಲಿಯೂ ತನ್ನನ್ನ ತೊಡಗಿಸಿಕೊಂಡಿದ್ದ ಸುರೇಶ್ ಚಂದ್ರ ಅವರು ಸುಮಾರು 50ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದು, ಕನ್ನಡದ ಸೂಪರ್ ಹಿಟ್ ಸಿನಿಮಾ ಚೆಲುವಿನ ಚಿತ್ತಾರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು, ಖ್ಯಾತ ನಟರಾದ ವಿಷ್ಣುವರ್ಧನ್, ಶಂಕರ್ ನಾಗ್, ಅಂಬರೀಷ್, ದೇವರಾಜ್ ಸೇರಿದಂತೆ ಹಲವು ಕನ್ನಡದ ಹಿರಿಯ ನಟದ ಜೊತೆಗೆ ಉತ್ತಮ ಒಡನಾಟವನ್ನು ಹೊಂದಿದ್ದರು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular