ಮಂಗಳವಾರ, ಏಪ್ರಿಲ್ 29, 2025
HomeNationalShaheed Diwas : ಶಹೀದ್‌ ದಿವಸ್‌ ಮಾರ್ಚ್ 23 ರಂದು ಸಾರ್ವಜನಿಕ ರಜೆ ಘೋಷಣೆ

Shaheed Diwas : ಶಹೀದ್‌ ದಿವಸ್‌ ಮಾರ್ಚ್ 23 ರಂದು ಸಾರ್ವಜನಿಕ ರಜೆ ಘೋಷಣೆ

- Advertisement -

ನವದೆಹಲಿ : ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ದಿನವನ್ನು ಶಹೀದ್ ದಿವಾಸ್ (Shaheed Diwas) ಎಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 23 ರಂದು ಪಂಜಾಬ್‌ ಸರಕಾರ ಸಾರ್ವಜನಿಕ ರಜೆ ಘೋಷಿಸಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ಮಾರ್ಚ್ 23 ರಂದು ಸಾರ್ವಜನಿಕ ರಜೆ ಘೋಷಿಸಿದ್ದಾರೆ.

‘ಶಹೀದ್ ದಿವಸ್’ ಅಥವಾ ಹುತಾತ್ಮರ ದಿನವು ಭಗತ್ ಸಿಂಗ್, ಸುಖದೇವ್ ಥಾಪರ್ ಮತ್ತು ಶಿವರಾಮ ರಾಜಗುರು ಅವರ ಮರಣದ ವಾರ್ಷಿಕೋತ್ಸವವಾಗಿದೆ. ವಿಧಾನಸಭೆಯಲ್ಲಿ ಶಹೀದ್ ಭಗತ್ ಸಿಂಗ್ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಾಪಿಸಲು ಪಂಜಾಬ್ ರಾಜ್ಯ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದ ನಂತರ ಪಂಜಾಬ್ ಸಿಎಂ ಭಗವಂತ್ ಮಾನ್ ಘೋಷಿಸಿದರು. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಕಾಂಗ್ರೆಸ್ ಮತ್ತು ಎಸ್‌ಎಡಿ – ಬಿಎಸ್‌ಪಿ ಒಗ್ಗೂಡಿಸಿ ಮತ್ತು ಮಾರ್ಚ್ 10 ರಂದು 117 ಅಸೆಂಬ್ಲಿ ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆದ್ದ ನಂತರ, ಯಾವುದೇ ಸರ್ಕಾರಿ ಕಚೇರಿಗಳು ಮುಖ್ಯಮಂತ್ರಿಯ ಛಾಯಾಚಿತ್ರಗಳನ್ನು ಪ್ರದರ್ಶಿಸುವುದಿಲ್ಲ. ಬದಲಾಗಿ ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಭಗತ್ ಸಿಂಗ್ ಮತ್ತು ಬಿಆರ್ ಅಂಬೇಡ್ಕರ್ ಅವರ ಫೋಟೋಗಳನ್ನು ಹಾಕಲಾಗುತ್ತದೆ ಎಂದಿದ್ದಾರೆ.

ಇದಕ್ಕೂ ಮೊದಲು ಮಾರ್ಚ್ 19 ರಂದು, ಭಗವಂತ್‌ ಮಾನ್ ತನ್ನ ಮೊದಲ ಕ್ಯಾಬಿನೆಟ್ ಸಭೆಯನ್ನು ನಡೆಸಿದರು. ಪೊಲೀಸ್ ಪಡೆಗಳಲ್ಲಿ 10,000 ಸೇರಿದಂತೆ ವಿವಿಧ ರಾಜ್ಯ ಇಲಾಖೆಗಳಲ್ಲಿ 25,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಿದ್ದಾರೆ. ನಂತರ ವಿಡಿಯೋ ಸಂದೇಶದ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಅಲ್ಲದೇ ಉದ್ಯೋಗಾವಕಾಶಕ್ಕೆ ಸಂಬಂಧಿಸಿದಂತೆ ತಿಂಗಳ ಒಳಗಾಗಿ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅರ್ಹತೆಯ ಮೇಲೆ ಉದ್ಯೋಗಾವಕಾಶವನ್ನು ನೀಡಲಾಗುವುದು ಎಂದಿದ್ದಾರೆ.

ಪಂಜಾಬ್ ಪೊಲೀಸ್‌ ಇಲಾಖೆಯಲ್ಲಿ 10,000 ಮಂದಿಗೆ ಉದ್ಯೋಗಗಳನ್ನು ನೀಡಲಾಗುವುದು ಮತ್ತು ಉಳಿದವುಗಳನ್ನು ವಿವಿಧ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಯಾವುದೇ ತಾರತಮ್ಯ ಇರುವುದಿಲ್ಲ, ಶಿಫಾರಸ್ಸು ಹಾಗೂ ಲಂಚಕ್ಕೆ ನೇಮಕಾತಿಯ ವೇಳೆಯಲ್ಲಿ ಅವಕಾಶವನ್ನೇ ನೀಡುವುದಿಲ್ಲ ಎಂದಿದ್ದಾರೆ. ಇನ್ನು ಈ “ಐತಿಹಾಸಿಕ” ನಿರ್ಧಾರವು ಯುವಕರಿಗೆ ಪಾರದರ್ಶಕ ಮತ್ತು ಅರ್ಹತೆ ಆಧಾರಿತ ಕಾರ್ಯವಿಧಾನದ ಮೂಲಕ ಸರ್ಕಾರಿ ವಲಯದಲ್ಲಿ ಉದ್ಯೋಗಗಳನ್ನು ಒದಗಿಸುವ ಮೂಲಕ ಉದ್ಯೋಗದ ಹೊಸ ಅವಕಾಶವನ್ನು ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ : ಮಲ್ಟಿಪ್ಲೆಕ್ಸ್ ನಿಂದ ಜೇಮ್ಸ್ ಕಿಕ್ ಔಟ್ ಗೆ ಒತ್ತಡ : ಬಿಜೆಪಿ ಶಾಸಕರ ವಿರುದ್ಧ ನಿರ್ಮಾಪಕರ ಅಸಮಧಾನ

ಇದನ್ನೂ ಓದಿ : TN Lockdown : ತಮಿಳುನಾಡಿನಲ್ಲಿ ಮತ್ತೆ ಕರ್ಫ್ಯೂ ?

( Shaheed Diwas Govt declares public holiday on March 23)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular