ಹೊಸದಿಲ್ಲಿ: ಹಾಡು ಹಗಲಲ್ಲೇ ಬ್ಯಾಂಕ್ ಮ್ಯಾನೇಜರ್ ಓರ್ವರನ್ನು ಉಗ್ರರು ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರಲ್ಲಿ ಓರ್ವನನ್ನು ಕಾಶ್ಮೀರಿ ಪೊಲೀಸರು ಎನ್ಕೌಂಟರ್ನಲ್ಲಿ (Shopian Encounter Update) ಹೊಡೆದು ಉರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿನ ಬ್ಯಾಂಕ್ನ ಮ್ಯಾನೇಜರ್ರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು. ಈ ಪ್ರಕರಣದ ಕಾರ್ಯಾಚರಣೆಗೆ ಇಳಿದ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಪೈಕಿ ಓರ್ವನನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೃಢಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರಿ ಝೋನ್ ಪೊಲೀಸರು ಶೋಪಿಯಾನ್ ಎನ್ಕೌಂಟರ್ ಅಪ್ಡೇಟ್ಸ್ ಎಂದು ಬರೆದುಕೊಂಡು ಮಾಹಿತಿಯನ್ನು ಹಂಚಿದ್ದಾರೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಎಲ್ಲಕಿ ದೇಹತಿ ಬ್ಯಾಂಕ್ ಉದ್ಯೋಗಿ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ವಿಜಯಕುಮಾರ್ ರಾಜಸ್ಥಾನದ ಹನುಮಾನ್ಗಢದ ನಿವಾಸಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
#ShopianEncounterUpdate: One of the killed #terrorists has been identified as Jan Mohd Lone of #Shopian. Besides other #terror crimes, he was involved in recent killing of Vijay Kumar, Bank manager on 2/6/22 in #Kulgam district: IGP Kashmir@JmuKmrPolice https://t.co/ltyIDWSGQj
— Kashmir Zone Police (@KashmirPolice) June 14, 2022
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಶೋಪಿಯಾನ್ನ ಕಾಂಜಿಯುಲಾರ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ.
ಇದನ್ನೂ ಓದಿ : couple murdered : ಮರ್ಯಾದಾ ಹತ್ಯೆಗೆ ಬಲಿಯಾದ ನವ ಜೋಡಿ : ಅಣ್ಣನಿಂದಲೇ ತಂಗಿ – ಭಾವನ ಬರ್ಬರ ಕೊಲೆ
ಇದನ್ನೂ ಓದಿ : Teen Shot Mother :ಮೊಬೈಲ್ ಹುಚ್ಚಿಗೆ ತಾಯಿಯನ್ನೇ ಕೊಂದ ಬಾಲಕ
ಇದನ್ನೂ ಓದಿ : Kim Kardashian : ಮರ್ಲಿನ್ ಮನ್ರೋ ಉಡುಪಿಗೆ ಹಾನಿ ಮಾಡಿದ ಕಿಮ್ ಕಾರ್ಡಶಿಯಾನ್ : ನೆಟ್ಟಿಗರ ಆಕ್ರೋಶ
Shopian Encounter Update terrorists killed Kashmir Police
Comments are closed.