ಮಂಗಳವಾರ, ಏಪ್ರಿಲ್ 29, 2025
HomeNationalFlights Canceled : ತಮಿಳುನಾಡಲ್ಲಿ ಭಾರೀ ಮಳೆ : 8 ವಿಮಾನಗಳ ಹಾರಾಟ ರದ್ದು

Flights Canceled : ತಮಿಳುನಾಡಲ್ಲಿ ಭಾರೀ ಮಳೆ : 8 ವಿಮಾನಗಳ ಹಾರಾಟ ರದ್ದು

- Advertisement -

ಚೆನ್ನೈ : ಕಳೆದ ನಾಲ್ಕು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ತಮಿಳುನಾಡು ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಿಂದ ಸಂಚರಿಸಬೇಕಾಗಿದ್ದ, ಎಂಟು ವಿಮಾನಗಳ (Flights Canceled) ಹಾರಾಟವನ್ನು ರದ್ದುಗೊಳಿಸಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮುಂಜಾನೆಯಿಂದಲೇ ಹವಾಮಾನ ವೈಪರಿತ್ಯ ಉಂಟಾಗಿದ್ದು, ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಾಗಿದ್ದ ಮಧುರೈ, ಮುಂಬೈ, ತಿರುಚನಾಪಲ್ಲಿ, ಶಾರ್ಜಾ ಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ತಮಿಳುನಾಡು ರಾಜ್ಯದ ಚೆನ್ನೈ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ತಮಿಳುನಾಡಿನ ತಿರುವಳ್ಳೂರ್, ಕಾಂಚೀಪುತಂ, ಚೆಂಗಲ್‌ ಪಟ್ಟು, ಕಾಂಜೀಪುರಂ, ಕೊಡಂಬಕ್ಕಂ, ಅಶೋಕ್ ನಗರಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಅಬ್ಬರಕ್ಕೆ 538ಕ್ಕೂ ಹೆಚ್ಚು ಗುಡಿಸಲುಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ. ಚೆನ್ನೈನ ಐದು ತಂಡಗಳು ಸೇರಿದಂತೆ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ರಕ್ಷಣಾ ಕಾರ್ಯಾ ನಡೆಸುತ್ತಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : ಬೆಂಗಳೂರು, ಕರಾವಳಿಯಲ್ಲಿ 3 ದಿನ ಭಾರಿ ಮಳೆ : Yellow Alert ಘೋಷಣೆ

ಇದನ್ನೂ ಓದಿ : ರಾಜ್ಯದಲ್ಲಿ ಬಿಟ್‌ ಕಾಯಿನ್ ಬಿರುಗಾಳಿ : ಮೋದಿ – ಬೊಮ್ಮಾಯಿ ಮಹತ್ವದ ಭೇಟಿ

(Tamil Nadu Heavy Rain and Bad Weather Conditions 8 Flights canceled)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular