ದೆಹಲಿ : (Ten people drowned) ಗಣೇಶಮೂರ್ತಿ ವಿಸರ್ಜನೆ ವೇಳೆ 10 ಮುಂದಿ ನೀರಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ. ಹರಿಯಾಣದ ಎರಡು ಕಡೆ ಹಾಗೂ ಉತ್ತರ ಪ್ರದೇಶದ ಒಂದು ಕಡೆ ಒಟ್ಟು ಮೂರು ಪ್ರತ್ಯೇಕ ಘಟನೆಗಳಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ಹರಿಯಾಣದಲ್ಲಿ ಸೋನಿಪತ್ ನಲ್ಲಿ ಮೂವರು ಮೃತಪಲಟ್ಟಿದ್ದು, ಹರಿಯಾಣದ ಮಹೇಂದ್ರ ಗಢದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಉನ್ನಾವೋನಲ್ಲಿ ಮೂವರು ಮೃತಪಟ್ಟಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷದಿಂದ ದೇಶದಲ್ಲಿ ಗಣೇಶೋತ್ಸವಕ್ಕೆ ಮಂಕು ಕವಿದಿತ್ತು. ಆದ್ರೆ ಈ ಬಾರಿ ಗಣೇಶೋತ್ಸವಕ್ಕೆ ಮತ್ತೆ ರಂಗು ಬಂದಿದೆ. ಎರಡು ಮೂರುವರ್ಷದಿಂದ ಹಬ್ಬ ಆಚರಿಸದ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲೆಡೆ ಗಣೇಶೋತ್ಸವವನ್ನ ಅದ್ಧೂರಿಯಾಗಿ ಆಚರಿಸಿದ್ದಾರೆ. ಅದರ ಜೊತೆಗೆ ಕೆಲವೆಡೆ ಅಹಿತಕರ ಘಟನೆಗಳು ನಡೀತಿವೆ.
ಹರಿಯಾಣದ ಸೋನಿಪತ್ ಮತ್ತು ಮಹೇಂದ್ರಗಢದಲ್ಲಿ ಆಗಸ್ಟ್ 31ರ ಗಣೇಶ ಚುತುರ್ಥಿಯ ದಿನ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪಿಸಲಾಗಿತ್ತು. 10 ದಿನ ಗಳ ಕಾಲ ನಡೆದ ಉತ್ಸವ ನಿನ್ನೆ ವಿಸರ್ಜನಾ ಮೆರವಣಿಗೆ ಮೂಲಕ ಕೊನೆಗೊಂಡಿತ್ತು. ಆದ್ರೆ ಸೋನಿಪತ್ ನ ಮಿಮಾರ್ ಪುರ್ ಘಾಟ್ ನಲ್ಲಿ ಮಗ ಮತ್ತು ಸೋದರಳಿಯನೊಂದಿಗೆ ಗಣೇಶ ಮೂರ್ತಿ ವಿಸರ್ಜಣೆಗೆ ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸದ್ಯ ಮೃತದೇಹಗಳನ್ನ ಹೊರತೆಗೆಯಲಾಗಿದೆ. ಅಂತೆಯೇ ಮಹೇಂದ್ರಗಢದಲ್ಲಿ, ಕನಿನಾ-ರೇವಾರಿ ರಸ್ತೆಯಲ್ಲಿರುವ ಜಗಡೋಲಿ ಗ್ರಾಮದ ಬಳಿ ಕಾಲುವೆಯಲ್ಲಿ ಗಣೇಶನ ವಿಗ್ರಹ ವಿಸರ್ಜನೆ ವೇಳೆ ಸುಮಾರು 9ಕ್ಕೂ ಹೆಚ್ಚು ಜನ ಕೊಚ್ಚಿ ಹೋಗಿದ್ದಾರೆ. ಕೊಚ್ಚಿ ಹೋದವರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.
ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್, ನಾವೆಲ್ಲರೂ ಈ ಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನಿಂತಿದ್ದೇವೆ. NDRF ತಂಡವು ಅನೇಕ ಜನರನ್ನ ರಕ್ಷಿಸಿದೆ ಎಂದಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರದ ಭರವಸೆಯನ್ನೂ ನೀಡಿದ್ದಾರೆ.
ಮೂವರು ಮಕ್ಕಳು ಜಲಸಮಾಧಿ : ಇನ್ನು ಉತ್ತರ ಪ್ರದೇಶದ ಉನ್ನಾವೋನಲ್ಲಿ ಗಂಗಾನದಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ಮಕ್ಕಳು ಜಲಸಮಾಧಿಯಾಗಿದ್ದಾರೆ. ಶುಕ್ರವಾರ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಕಾಲು ಜಾರಿ ಗಂಗಾ ನದಿಗೆ ಬಿದ್ದಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ರೆ, ಮತ್ತೊಬ್ಬ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ : Shepherds stuck :ನಿರಂತರ ಮಳೆಗೆ ನಲುಗಿದ ಕರುನಾಡು : 12 ದಿನಗಳಿಂದ ನಡುಗಡ್ಡೆಯಲ್ಲೇ ಸಿಲುಕಿದ ಕುರಿಗಾಹಿಗಳು
ಇದನ್ನೂ ಓದಿ : World Suicide Prevention Day:ಇಂದು ವಿಶ್ವ ಆತ್ಮಹತ್ಯೆ ತಡೆ ದಿನ : ಏನಿದರ ಉದ್ದೇಶ ?
Ten people drowned -7 Drown In Haryana-3 in Up-During Ganesha Idols’ Immersion Ceremony