Kanhaiya Lal’s murder :ಕನ್ಹಯ್ಯಲಾಲ್​ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ

ರಾಜಸ್ಥಾನ : Kanhaiya Lal’s murder : ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್​ ಕನ್ಹಯ್ಯಲಾಲ್​ ಶಿರಚ್ಛೇಧ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪ್ರವಾದಿ ಮುಹಮ್ಮದ್​ ವಿರುದ್ಧ ಮಾತನಾಡಿ ಭಾರೀ ವಿವಾದದ ಸುಳಿಯಲ್ಲಿ ಸಿಲುಕಿರುವ ನೂಪುರ್​ ಶರ್ಮಾ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಕನ್ಹಯ್ಯಲಾಲ್​ ಪೋಸ್ಟ್​ ಹಾಕಿದ್ದಾರೆ ಎಂಬ ಕಾರಣಕ್ಕೆ ಈ ಕೊಲೆ ನಡೆದಿತ್ತು . ಈ ಪ್ರಕರಣದಲ್ಲಿ ಇದೀಗ ಪೊಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇವರು ಇಡೀ ಪ್ರಕರಣದ ಸಂಚು ಹಾಗೂ ಸಿದ್ಧತೆಯ ಮಾಸ್ಟರ್​ ಮೈಂಡ್​ ಆಗಿದ್ದರು ಎಂದು ಉದಯಪುರ ಐಜಿ ಪ್ರಫುಲ್ಲ ಕುಮಾರ್​ ಮಾಹಿತಿ ನೀಡಿದ್ದಾರೆ.


ಮಂಗಳವಾರ ಮಧ್ಯಾಹ್ನದ ವೇಳೆಯಲ್ಲಿ ಅಂಗಡಿಯಲ್ಲಿ ಬಟ್ಟೆ ಹೊಲಿಯುತ್ತಿದ್ದ ಕನ್ಹಯ್ಯಲಾಲ್​ ಬಳಿಗೆ ಬಂದ ಇಬ್ಬರು ದುಷ್ಕರ್ಮಿಗಳು ಬಟ್ಟೆ ಹೊಲಿದುಕೊಡುವಂತೆ ಹೇಳಿದ್ದರು, ಕನ್ಹಯ್ಯಲಾಲ್​ ಇವರು ಗ್ರಾಹಕರು ಎಂದುಕೊಂಡು ಮಾತನಾಡಲು ಮುಂದಾಗುತ್ತಿದ್ದಂತೆಯೇ ಇಬ್ಬರು ದುಷ್ಕರ್ಮಿಗಳು ಕನ್ಹಯ್ಯಲಾಲ್​​ ಕತ್ತನ್ನು ಸೀಳಿದ್ದರು. ಬರೋಬ್ಬರಿ 27 ಬಾರಿ ಕನ್ಹಯ್ಯಲಾಲ್ ಭುಜದಿಂದ ಕುತ್ತಿಗೆಯವರೆಗೆ ಇರಿದು ಆತನ ಶಿರಚ್ಛೇಧ ಮಾಡಿದ್ದರು. ಮಾತ್ರವಲ್ಲದೇ ಈ ಸಂಪೂರ್ಣ ದೃಶ್ಯವನ್ನು ಚಿತ್ರೀಕರಿಸಿ ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡುವ ಮೂಲಕ ಪ್ರಧಾನಿ ಮೋದಿ ಹಾಗೂ ನೂಪುರ್ ಶರ್ಮಾರಿಗೂ ಜೀವ ಬೆದರಿಕೆಯೊಡ್ಡಿದ್ದರು. ಈ ಘಟನೆ ಬಳಿಕ ಅಲರ್ಟ್ ಆದ ಪೊಲೀಸರು ಮಾರನೇ ದಿನವೇ ಕೊಲೆ ಎಸಗಿದ ರಿಯಾಜ್​ ಅಖ್ತರಿ ಹಾಗೂ ಘೌಸ್​ ಮೊಹಮ್ಮದ್​ರನ್ನು ಬಂಧಿಸಿದ್ದರು.


ಸೋಶಿಯಲ್​ ಮೀಡಿಯಾದಲ್ಲಿ ನೂಪುರ್​ ಶರ್ಮಾ ಪರವಾಗಿ ಪೋಸ್ಟ್​ ಹಾಕುತ್ತಿದ್ದಂತೆಯೇ ಜೂನ್​ 17ರಂದು ಮೃತ ಕನ್ಹಯ್ಯಲಾಲ್​ಗೆ ಜೀವ ಬೆದರಿಕೆಯೊಡ್ಡಲಾಗಿತ್ತು. ಇದರಿಂದ ಭಯಗೊಂಡಿದ್ದ ಕನ್ಹಯ್ಯ ಲಾಲ್​ ಪೊಲೀಸ್​ ಠಾಣೆಗೂ ತೆರಳಿ ತಮಗೆ ಜೀವ ಭಯ ಇದೆ ಎಂದು ಹೇಳಿದ್ದರು. ಆದರೆ ಅಂದು ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದೇ ನಿರ್ಲಕ್ಷ್ಯ ತೋರಿದ್ದರು ಎನ್ನಲಾಗಿದೆ.

ಇದನ್ನು ಓದಿ : KL Rahul Health Report : ರಾಹುಲ್‌ಗೆ ಜರ್ಮನಿಯಲ್ಲಿ ಆಪರೇಷನ್ ಸಕ್ಸಸ್.. ಪ್ರಿಯತಮನ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ ಪ್ರೇಯಸಿ

ಇದನ್ನೂ ಓದಿ : ಬೆನ್ನು ಬಿಡದೆ ಫಾಲೋ ಮಾಡಿದ ಕ್ಯಾಮರಾಮೆನ್‌ಗೆ ಸೀರಿಯಸ್ ಲುಕ್ ಕೊಟ್ಟ ಕಿಂಗ್ ಕೊಹ್ಲಿ

Two more arrested in connection with Kanhaiya Lal’s murder

Comments are closed.