ಸಿಎಂ ನಿವಾಸದಲ್ಲಿ ʼಕ್ರೇಜಿ ಸ್ಟಾರ್': ಡಿ.ಕೆ.ಶಿವಕುಮಾರಗೆ ಹೂಗುಚ್ಛ ನೀಡಿದ ರವಿಚಂದ್ರನ್

ಬೆಂಗಳೂರು: ಕನ್ನಡ ಚಿತ್ರರಂಗದ 'ಕ್ರೇಜಿ ಸ್ಟಾರ್' ವಿ. ರವಿಚಂದ್ರನ್ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಸೌಹಾರ್ದಯುತವಾಗಿ ಭೇಟಿಯಾಗಿದ್ದಾರೆ.

By Meghana Pranuth | ಮೇಘನಾ ಪ್ರಣೂತ್‌

1 min read

WhatsAppPost
webp
webp

ಬೆಂಗಳೂರು: ಕನ್ನಡ ಚಿತ್ರರಂಗದ 'ಕ್ರೇಜಿ ಸ್ಟಾರ್' ವಿ. ರವಿಚಂದ್ರನ್ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಸೌಹಾರ್ದಯುತವಾಗಿ ಭೇಟಿಯಾಗಿದ್ದಾರೆ.

 ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಆಗಮಿಸಿದ ನಟ ರವಿಚಂದ್ರನ್ ಅವರು, ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸುಂದರ ಹೂಗುಚ್ಛ ನೀಡಿ ಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸಿದರು.

ಭೇಟಿಯ ವೇಳೆ ಉಭಯ ಕುಶಲೋಪರಿ ವಿಚಾರಿಸಿದ ನಟ ರವಿಚಂದ್ರನ್ ಹಾಗೂ ಸಿಎಂ ಡಿ.ಕೆ. ಶಿವಕುಮಾರ್, ಕೆಲಕಾಲ ಪ್ರಚಲಿತ ವಿಷಯಗಳು ಹಾಗೂ ಚಿತ್ರರಂಗದ ಪ್ರಸ್ತುತ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದರು ಎನ್ನಲಾಗಿದೆ.

ದಿಢೀರ್ ಸೌಹಾರ್ದಯುತ ಭೇಟಿ ಸ್ಯಾಂಡಲ್ವುಡ್ ಹಾಗೂ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ಇಬ್ಬರ ಆತ್ಮೀಯತೆಯ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

 

Topics