ಅಪ್ರಾಪ್ತರ ಗರ್ಭಧಾರಣೆ ತಡೆಗೆ ರಾಜ್ಯ ಸರ್ಕಾರದಿಂದ ಮಾಸ್ಟರ್ ಪ್ಲಾನ್
ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ಇನ್ಮುಂದೆ ಪ್ರೌಢಶಾಲಾ ವಿದ್ಯಾರ್ಥಿನಿಯರ ಮಾಸಿಕ ಋತುಚಕ್ರದ ಏರುಪೇರುಗಳ ಮೇಲೆ ವಿಶೇಷ ನಿಗಾ ಇಡಲಾಗುತ್ತದೆ.
ರಾಜ್ಯದಲ್ಲಿ ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯರು ಗರ್ಭ ಧರಿಸುತ್ತಿರುವ ಆತಂಕಕಾರಿ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದು, ಇದನ್ನು ತಡೆಯಲು ಆರೋಗ್ಯ ಇಲಾಖೆಯು ಅತ್ಯಂತ ಸೂಕ್ಷ್ಮ ಹಾಗೂ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹದಿಹರೆಯದ ಹೆಣ್ಣುಮಕ್ಕಳಲ್ಲಿ ಕಂಡುಬರುತ್ತಿರುವ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ ಮತ್ತು ಅಪ್ರಾಪ್ತ ಗರ್ಭಧಾರಣೆಯಂತಹ ಸಾಮಾಜಿಕ ಪಿಡುಗುಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಅವರ ಜೀವ ರಕ್ಷಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.
ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ಇನ್ಮುಂದೆ ಪ್ರೌಢಶಾಲಾ ವಿದ್ಯಾರ್ಥಿನಿಯರ ಮಾಸಿಕ ಋತುಚಕ್ರದ ಏರುಪೇರುಗಳ ಮೇಲೆ ವಿಶೇಷ ನಿಗಾ ಇಡಲಾಗುತ್ತದೆ. ಪ್ರತಿ ತಿಂಗಳು ಬಾಲಕಿಯರ ಮುಟ್ಟಿನ ವಿವರಗಳನ್ನು ಸಂಗ್ರಹಿಸಲು ಶಾಲೆಗಳಲ್ಲಿ ಪ್ರತ್ಯೇಕ ಹಾಗೂ ಅತ್ಯಂತ ಗೌಪ್ಯವಾದ ರಿಜಿಸ್ಟರ್ಗಳನ್ನು ನಿರ್ವಹಿಸಲು ಆದೇಶಿಸಲಾಗಿದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿನಿಯ ಋತುಚಕ್ರ ಸತತವಾಗಿ ನಿಂತಿರುವುದು ಅಥವಾ ಅನಿಯಮಿತವಾಗಿರುವುದು ಕಂಡುಬಂದರೆ, ಶಾಲಾ ಶಿಕ್ಷಕರು ತಕ್ಷಣವೇ ಅದನ್ನು ನಿಯೋಜಿತ ಆರೋಗ್ಯ ಸಿಬ್ಬಂದಿಯ ಗಮನಕ್ಕೆ ತರುವುದು ಕಡ್ಡಾಯವಾಗಿದೆ.
ಅನುಮಾನಾಸ್ಪದ ಪ್ರಕರಣಗಳು ಪತ್ತೆಯಾದ ತಕ್ಷಣವೇ ಬಾಲಕಿಯರನ್ನು ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಸೂಕ್ತ ತಪಾಸಣೆಗೆ ಶಿಫಾರಸು ಮಾಡಲಾಗುತ್ತದೆ. ಈ ಇಡೀ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳ ಗೌಪ್ಯತೆ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಯಾವುದೇ ಶಾಲಾ ಆಡಳಿತ ಮಂಡಳಿ ಅಥವಾ ವೈದ್ಯಕೀಯ ಸಿಬ್ಬಂದಿ ಬೇಜವಾಬ್ದಾರಿತನ ತೋರಿದರೆ ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
Topics
ಸಂಬಂಧಿತ ಸುದ್ದಿಗಳು
karnataka
ಮುಂದಿನ 2 ದಿನ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ
karnataka
ಹಾಸನ-ಮಂಗಳೂರು ಘಾಟ್ ಸೆಕ್ಷನ್ನಲ್ಲಿ ನಿರಂತರ ಗುಡ್ಡ ಕುಸಿತ : ರೈಲ್ವೇ ಪ್ರಯಾಣಿಕರಿಗೆ ಆತಂಕ
karnataka
ಹಬ್ಬದ ಸೀಸನ್ ಆರಂಭದ ಬೆನ್ನಲ್ಲೇ ರಾಜ್ಯದ ಜನತೆಗೆ ಬೆಲೆ ಏರಿಕೆ ಶಾಕ್!
karnataka

