ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್: ಮನೆಯಲ್ಲೇ ಕುಳಿತು ಮಾಡಬಹುದು ಇ-ಕೆವೈಸಿ!
ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ನಿಯಮಾವಳಿಗಳ ಪ್ರಕಾರ, ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಫಲಾನುಭವಿಯೂ ಪ್ರತಿ ಐದು ವರ್ಷಕ್ಕೊಮ್ಮೆ ಮರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಕೋಟ್ಯಂತರ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತ್ಯಂತ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ನಿಯಮಾವಳಿಗಳ ಪ್ರಕಾರ, ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಫಲಾನುಭವಿಯೂ ಪ್ರತಿ ಐದು ವರ್ಷಕ್ಕೊಮ್ಮೆ ಮರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪ್ರಸ್ತುತ ಈ ಮರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು 2026ರ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದ್ದು, ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ನಿರಂತರವಾಗಿ ದೀರ್ಘ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಒಮ್ಮೆಗೇ ನೂರಾರು ಜನರು ಮುಗಿಬೀಳುತ್ತಿರುವುದರಿಂದ ತಾಂತ್ರಿಕ ಸರ್ವರ್ ಸಮಸ್ಯೆ ಎದುರಾಗುತ್ತಿದ್ದು, ಜನರು ದಿನಪೂರ್ತಿ ಕಾದರೂ ಕೆಲಸವಾಗದೆ ಹೈರಾಣಾಗುತ್ತಿದ್ದಾರೆ.
ಈ ಗೊಂದಲ ಹಾಗೂ ಸಾರ್ವಜನಿಕರ ಪರದಾಟಕ್ಕೆ ಶಾಶ್ವತ ಮುಕ್ತಿ ನೀಡಲು ಮುಂದಾಗಿರುವ ಸರ್ಕಾರ, ಜನರು ಇನ್ನು ಮುಂದೆ ನ್ಯಾಯಬೆಲೆ ಅಂಗಡಿಗಳಿಗೆ ಅಲೆಯುವುದನ್ನು ತಪ್ಪಿಸಲು ಮೊಬೈಲ್ ಮೂಲಕವೇ ಮನೆಯಲ್ಲೇ ಕುಳಿತು ಸುಲಭವಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಡಿಜಿಟಲ್ ಸೌಲಭ್ಯವನ್ನು ಜಾರಿಗೆ ತರುತ್ತಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ವಿಶೇಷ ಮೊಬೈಲ್ ಅಪ್ಲಿಕೇಶನ್ ಒಂದನ್ನು ಸಿದ್ಧಪಡಿಸಲಾಗುತ್ತಿದ್ದು, ಇದು ಇನ್ನೊಂದು ವಾರದಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ.
ಈ ನೂತನ ಆ್ಯಪ್ ಮೂಲಕ ಫಲಾನುಭವಿಗಳು ತಮ್ಮ ಆಧಾರ್ ಒಟಿಪಿ ಅಥವಾ ಮುಖದ ಗುರುತು ಬಳಸಿಕೊಂಡು ಇ-ಕೆವೈಸಿಯನ್ನು ಕೇವಲ ಐದೇ ನಿಮಿಷದಲ್ಲಿ ಅಪ್ಡೇಟ್ ಮಾಡಿಕೊಳ್ಳಬಹುದು. ಈ ಡಿಜಿಟಲ್ ಪ್ರಕ್ರಿಯೆಗೆ ಕುಟುಂಬದ ಸದಸ್ಯರ ಮೂಲ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಂಖ್ಯೆ, ಆಧಾರ್ಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ ಹಾಗೂ ಎಲ್ಪಿಜಿ ಗ್ಯಾಸ್ ಸಂಪರ್ಕದ ಪುಸ್ತಕದ ಅಗತ್ಯವಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚುವರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
ರಾಜ್ಯದ ಒಟ್ಟು 2.67 ಕೋಟಿ ಫಲಾನುಭವಿಗಳ ಪೈಕಿ ಇ-ಕೆವೈಸಿ ಪೂರ್ಣಗೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಭೀತಿ ಎದುರಾಗಿತ್ತು. ಆದರೆ ಸರ್ಕಾರದ ಈ ಹೊಸ ತಾಂತ್ರಿಕ ಸೌಲಭ್ಯವು ಸಾರ್ವಜನಿಕರ ಸಮಯ, ಶ್ರಮ ಹಾಗೂ ಸುದೀರ್ಘ ಅಲೆದಾಟವನ್ನು ಉಳಿಸಲಿದ್ದು, ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗೆ ಕಾರಣವಾಗಲಿದೆ.
Topics
ಸಂಬಂಧಿತ ಸುದ್ದಿಗಳು
karnataka
ವರುಣನ ದ್ವಿತೀಯ ಇನ್ನಿಂಗ್ಸ್ : ಸೆಪ್ಟೆಂಬರ್ 19 ರಿಂದ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ
karnataka
ಕಿಚನ್ ಬಜೆಟ್ ಏರುಪೇರು : ತಲೆತಿರುಗಿಸುತ್ತೆ ಅಕ್ಕಿ ಬೆಲೆ!
karnataka
ಇಂಜಿನಿಯರ್ಗಳ ಹೆಸರ ಮುಂದೆ ಇನ್ಮುಂದೆ Er.: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
karnataka

