ಕಾರ್ಕಳ-ಮೂಡುಬಿದಿರೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ

ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ

By ಅಶ್ವಥ್ ಆಚಾರ್ಯ | Ashwath Acharya

1 min read

WhatsAppPost
Accident on Karkala-Moodubidire highway Bus collides with former Minister Ramanath Rai car
Accident on Karkala-Moodubidire highway Bus collides with former Minister Ramanath Rai car

ಉಡುಪಿ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ವೊಂದು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ರಮಾನಾಥ್ ರೈ ಅವರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ಭಾಗದಿಂದ ಮೂಡುಬಿದಿರೆ ಕಡೆಗೆ ಅತಿ ವೇಗವಾಗಿ ತೆರಳುತ್ತಿದ್ದ ಬಸ್, ಸಾಣೂರು ಜಂಕ್ಷನ್ ತಲುಪುತ್ತಿದ್ದಂತೆ ಮಾಜಿ ಸಚಿವ ರಮಾನಾಥ್ ರೈ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ತೀವ್ರವಾಗಿ ಜಖಂಗೊಂಡಿದ್ದು, ಒಳಗಿದ್ದ ರಮಾನಾಥ್ ರೈ ಹಾಗೂ ಇತರೆ ಪ್ರಯಾಣಿಕರು ಸಿಲುಕಿಕೊಂಡಿದ್ದರು.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಾಣೂರಿನ ಸ್ಥಳೀಯರು ಹಾಗೂ ವಾಹನ ಸವಾರರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ರಮಾನಾಥ್ ರೈ ಅವರನ್ನು ತೀವ್ರ ಹರಸಾಹಸ ಪಟ್ಟು ಹೊರತೆಗೆದ ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭೀಕರ ಅಪಘಾತದಲ್ಲಿ ಕೇವಲ ಕಾರಿನಲ್ಲಿದ್ದವರು ಮಾತ್ರವಲ್ಲದೆ, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳೆಲ್ಲರನ್ನೂ ಆಸ್ಪತ್ರೆಗೆ ತಲುಪಿಸಲು ಸ್ಥಳೀಯರು ಸಂಪೂರ್ಣ ಸಹಕಾರ ನೀಡಿದ್ದಾರೆ. ಅಪಘಾತದ ಬೆನ್ನಲ್ಲೇ ಸಾಣೂರು ಜಂಕ್ಷನ್ನಲ್ಲಿ ಕೆಲ ಕಾಲ ಭೀತಿ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Topics

ಸಂಬಂಧಿತ ಸುದ್ದಿಗಳು