News Next Kannada

udupi

ಬ್ರಹ್ಮಾವರ : ಸುಟ್ಟು ಕರಕಲಾಯ್ತು ಚಲಿಸುತ್ತಿದ್ದ ಖಾಸಗಿ ಬಸ್‌

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಈ ಅವಘಡ ಸಂಭವಿಸಿದೆ. ಉಡುಪಿ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಪ್ರಯಾಣಿಸುತ್ತಿತ್ತು.

By ಅಶ್ವಥ್ ಆಚಾರ್ಯ | Ashwath Acharya
brahmavara Udupi Sagara private bus catches fire 1

ಬ್ರಹ್ಮಾವರ : ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಡೆದಿದೆ.

brahmavara Udupi Sagara private bus catches fire

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಈ ಅವಘಡ ಸಂಭವಿಸಿದೆ. ಉಡುಪಿ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿವಮೊಗ್ಗ ಜಿಲ್ಲೆಯ ಸಾಗರದ ಕಡೆಗೆ ಪ್ರಯಾಣಿಸುತ್ತಿತ್ತು.

brahmavara Udupi Sagara private bus catches fire 5

ಉಪ್ಪೂರು ಬಳಿಗೆ ಬರುತ್ತಿದ್ದಂತೆಯ ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

brahmavara Udupi Sagara private bus catches fire 4

ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿ ಪ್ರಯಾಣಿಕರನ್ನು ಕೂಡಲೇ ಕೆಳಗೆ ಇಳಿಸಿದ್ದಾರೆ.

brahmavara Udupi Sagara private bus catches fire 3

ಏಕಾಏಕಿಯಾಗಿ ಇಡೀ ಬಸ್ಸಿಗೆ ಬೆಂಕಿ ಆವರಿಸಿತ್ತು. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದ್ರು. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಸ್ಸಿನ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

brahmavara Udupi Sagara private bus catches fire 2

ಆದರೆ ಖಾಸಗಿ ಬಸ್‌ ಬೆಂಕಿಯ ಕೆನ್ನಾಲಗೆಯಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಯಾವ ಕಾರಣದಿಂದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.