ಉಡುಪಿ: ಪಶ್ಚಿಮ ಕರಾವಳಿಯಲ್ಲಿ ಕಡಲ ಅಬ್ಬರ – ಮೀನುಗಾರಿಕಾ ಬೋಟ್ ಮುಳುಗಡೆ , 7 ಮಂದಿ ರಕ್ಷಣೆ
ಉಡುಪಿಯ ಪಶ್ಚಿಮ ಕರಾವಳಿ ತೀರದಲ್ಲಿ ಕಡಲ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟು ಮುಳುಗಡೆಯಾದ ಭೀಕರ ಘಟನೆ ಸಂಭವಿಸಿದೆ.
By Meghana Pranuth | ಮೇಘನಾ ಪ್ರಣೂತ್
1 min read
ಉಡುಪಿ: ಉಡುಪಿಯ ಪಶ್ಚಿಮ ಕರಾವಳಿ ತೀರದಲ್ಲಿ ಕಡಲ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟು ಮುಳುಗಡೆಯಾದ ಭೀಕರ ಘಟನೆ ಸಂಭವಿಸಿದೆ. ಬೋಟಿನಲ್ಲಿದ್ದ ಏಳು ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದು, ಸ್ಥಳೀಯ ಮೀನುಗಾರರ ಸಕಾಲಿಕ ಕಾರ್ಯಾಚರಣೆಯಿಂದಾಗಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಮುದ್ರದಲ್ಲಿ ಪ್ರತಿ ದಿನ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ಮೀನುಗಾರರು ತೀವ್ರ ಅಪಾಯಕಾರಿ ಸ್ಥಿತಿಯಲ್ಲೇ ಮೀನುಗಾರಿಕೆ ನಡೆಸುತ್ತಿದ್ದಾರೆ. ಎಂದಿನಂತೆ ಮೀನುಗಾರಿಕೆಗೆ ತೆರಳಿದ್ದ ವೇಳೆ, ಅಲೆಗಳ ಭೋರ್ಸೇತಕ್ಕೆ ಸಿಲುಕಿ ಬೋಟ್ ಮುಳುಗಡೆಯಾಗಿದೆ. ಇದರಲ್ಲಿದ್ದ ಏಳು ಮಂದಿ ಮೀನುಗಾರರು ಸಮುದ್ರ ಪಾಲಾಗುವ ಭೀತಿ ಎದುರಾಗಿತ್ತು.
ಅಪಾಯದ ಸಮಯದಲ್ಲಿ ಕರಾವಳಿ ಕಾವಲು ಪಡೆ (Coastal Security Police) ಪೊಲೀಸರಿಂದ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆದರೆ, ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಮೀನುಗಾರರು ತಮ್ಮ ಸಹೋದ್ಯೋಗಿಗಳ ರಕ್ಷಣೆಗೆ ಧಾವಿಸಿದ್ದಾರೆ. ಜೀವದ ಹದನೋಡದೆ ಸಮುದ್ರಕ್ಕೆ ಇಳಿದು ಸಾಹಸಿಕ ಕಾರ್ಯಾಚರಣೆ ನಡೆಸಿ, ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ದಂಡೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಮುದ್ರದಲ್ಲಿ ಕಡಲ ಕೊರೆತ ಮತ್ತು ಅಲೆಗಳ ರಭಸ ಹೆಚ್ಚುತ್ತಿರುವುದರಿಂದ ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಕಷ್ಟದ ಸಮಯದಲ್ಲಿ ನೆರವಿಗೆ ಬಾರದ ಕರಾವಳಿ ಕಾವಲು ಪಡೆಯ ವಿರುದ್ಧ ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Topics
ಸಂಬಂಧಿತ ಸುದ್ದಿಗಳು
udupi
ರೋಟರಿ ಕ್ಲಬ್ ಕೋಟ ಬ್ರಿಗೇಡ್ ನೇತೃತ್ವದಲ್ಲಿ ರೋಟರಿ ಜಿಲ್ಲೆ. 3182, ವಲಯ. 2ರ ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್ ಝೋನಲ್ ಸೆಮಿನಾರ್
udupi
ಸರ್ಕಾರಿ ಅಕ್ಕಿ ಅಕ್ರಮ ದಾಸ್ತಾನು ಆರೋಪ; ಗುಜರಿ ವ್ಯಾಪಾರಿಗೆ ಬೆದರಿಕೆ, ನಾಗೇಂದ್ರ ಪುತ್ರನ್ ಸೇರಿ ಮೂವರ ವಿರುದ್ದ ಎಫ್ಐಆರ್
udupi
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು
udupi

