Arun Singh : ರಾಜ್ಯಕ್ಕೆ ಆಗಮಿಸಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ : ಸಿಎಂ ಬದಲಾವಣೆಯ ಬಗ್ಗೆ ಹೇಳಿದ್ದೇನು ಗೊತ್ತಾ ?

ಬೆಂಗಳೂರು : ರಾಜ್ಯದಲ್ಲಿ ‌ಸಿಎಂ ಬದಲಾವಣೆಯ ಮಾತು ಕೇಳಿ ಬಂದ ಬೆನ್ನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದಾರೆ. ಅರುಣ್ ಸಿಂಗ್ ಭೇಟಿ ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಬಿಜೆಪಿಯಲ್ಲಿ ಬುಗಿಲೆದ್ದಿರುವ ನಾಯಕತ್ವ ಬದಲಾವಣೆ ಯ ಒತ್ತಡದ ಬೆನ್ನಲ್ಲೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿ ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಜೂನ್ 18 ರಂದು ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಎರಡು ದಿನ ರಾಜ್ಯದಲ್ಲಿಯೇ ಇರಲಿದ್ದೇನೆ. ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಸದ್ಯಕ್ಕೆ ಈ ಕೂಡಲೇ ಯಾವುದೇ ಪ್ರತಿಕ್ರಿಯಿಸೋದಿಲ್ಲ. ರಾಜ್ಯ ದಲ್ಲಿ ಬಿಜೆಪಿ ಸರ್ಕಾರ ಕೊರೋನಾ ಸಂದರ್ಭದಲ್ಲಿ ಉತ್ತಮ ವಾಗಿ ಕೆಲಸ ನಿರ್ವಹಿಸುತ್ತಿದೆ.‌ ಇದನ್ನು ಕಾಂಗ್ರೆಸ್ ಸಹಿಸದೇ ಬರೀ ವಾಗ್ದಾಳಿ ನಡೆಸುತ್ತಿದೆ. ಜೆಡಿಎಸ್ ಮಾತ್ರ ಐಸೋಲೇಷನ್ ನಲ್ಲಿ ಇದೆ. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ಚರ್ಚಿಸಲು ಕರ್ನಾಟಕಕ್ಕೆ ಆಗಮಿಸಿದ್ದೇನೆ ಎಂದರು.

Comments are closed.