ಬೆಂಗಳೂರು : bjp janostava postpone : ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಜನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಬೇಕು ಅಂತಾ ಸಿದ್ಧತೆ ನಡೆಸುತ್ತಲೇ ಇದೆ. ಆದರೆ ಅದನೋ ಗೊತ್ತಿಲ್ಲ ಬಿಜೆಪಿಯ ಈ ಜನೋತ್ಸವ ಕಾರ್ಯಕ್ರಮಕ್ಕೆ ಪದೇ ಪದೇ ವಿಘ್ನಗಳು ಎದುರಾಗುತ್ತಲೇ ಇದೆ. ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ.
ನಾಳೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮವನ್ನು ನಡೆಸಬೇಕೆಂದು ಎಲ್ಲಾ ರೀತಿಯ ತಯಾರಿಗಳನ್ನು ಮಾಡಲಾಗಿತ್ತು. ಆದರೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಂದು ದಿನಗಳ ಶೋಕಾಚರಣೆಯನ್ನೂ ಆಚರಿಸಲಾಗುತ್ತಿದೆ. ಅಲ್ಲದೇ ಸಂಪುಟದ ಸಚಿವರೊಬ್ಬರು ಮೃತರಾದ ಈ ದುಃಖದ ಸಂದರ್ಭದಲ್ಲಿ ಜನೋತ್ಸವದಂತಹ ಕಾರ್ಯಕ್ರಮವನ್ನು ಆಚರಿಸುವುದು ಬೇಡ ಎಂದು ನಿರ್ಧರಿಸಿದ ಬೊಮ್ಮಾಯಿ ಸರ್ಕಾರ ಈ ನಿರ್ಧಾರವನ್ನು ಘೋಷಿಸಿದೆ.
ಉಮೇಶ್ ಕತ್ತಿ ನಿಧನಕ್ಕೂ ಮುನ್ನಾ ಕೂಡ ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಆಚರಣೆಯು ವಿರೋಧವನ್ನು ಎದುರಿಸುತ್ತಲೇ ಇತ್ತು. ರಾಜ್ಯದಲ್ಲಿ ನೆರೆ ಬಂದಿದೆ. ಸಾಕಷ್ಟು ಜನರು ಮನೆ – ಮಠಗಳನ್ನು ಕಳೆದುಕೊಂಡಿದ್ದಾರೆ. ಜೀವ ಹಾನಿ ಕೂಡ ಸಂಭವಿಸಿದೆ. ರಾಜ್ಯದ ಜನತೆಯ ಬದುಕೇ ದುಸ್ಥರಗೊಂಡಿರುವ ಈ ಸಂದರ್ಭದಲ್ಲಿ ಸರ್ಕಾರಕ್ಕೆ ಸಂಭ್ರಮ ಬೇಕೆ ಎಂದು ವಿಪಕ್ಷಗಳು ಟೀಕೆ ಮಾಡುತ್ತಲೇ ಇದ್ದವು.
ಈ ಹಿಂದೆ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿಯೇ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರವು ಸಾಧನಾ ಸಮಾವೇಶ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಆದರೆ ಹಿಂದೂ ಕಾರ್ಯಕರ್ತ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದರು. ಪಕ್ಷದ ಕಾರ್ಯಕರ್ತ ಮೃತಪಟ್ಟ ಹಿನ್ನೆಲೆಯಲ್ಲಿ ನಾವು ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸುತ್ತಿದ್ದೇವೆ ಎಂದು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.
ಇದನ್ನೂ ಓದಿ : Umesh Katthi :ಎಂಟು ಬಾರಿ ಶಾಸಕನಾಗಿ ಆಯ್ಕೆ, ನೇರ ನುಡಿ, ಮುತ್ಸದ್ಧಿ ನಾಯಕ : ಹೀಗಿತ್ತು ಕತ್ತಿ ನಡೆದುಬಂದ ರಾಜಕೀಯ ಹಾದಿ
bjp janostava postpone over minister umesh katti death
Comments are closed.