JP Nadda : ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ : ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಇಲ್ಲ : ಜೆಪಿ ನಡ್ಡಾ

ಪಣಜಿ : ರಾಜ್ಯದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶಾಕಿಂಗ್‌ ಹೇಳಿಕೆ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆಯ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬಿಜೆಪಿ ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಗೋವಾ ಪ್ರವಾಸ ಕೈಗೊಂಡಿರುವ ಜೆಪಿ ನಡ್ಡಾ ಅವರು, ಮಾಧ್ಯಮದವರೊಂದಿಗೆ ಮಾತನಾಡಿದ್ರು. ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಜನಪರ ಕಾರ್ಯಗಳನ್ನು ಮಾಡುತ್ತಿದೆ. ನಾವು ಎಲ್ಲವನ್ನೂ ಗಮನಿಸುತ್ತಿದ್ದೇವೆ. ನಾಯಕತ್ವ ಬದಲಾವಣೆಯಾಗಲಿ, ರಾಜಕೀಯ ಬೆಳವಣಿಗೆಯಾಗಲಿ ಇಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಜೆಪಿ ನಡ್ಡಾ ಹೇಳಿಕೆ ನೀಡಿದ ಬೆನ್ನಲ್ಲೇ ನಿಜಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆಯಾ ಅನ್ನೋ ಅನುಮಾನ ಮೂಡುತ್ತಿದೆ. ಹೈಕಮಾಂಡ್‌ ನಾಯಕರೇ ಯಡಿಯೂರಪ್ಪ ಅವರಿಗೆ ಸಿಎಂ ಆಗಿ ಮುಂದುವರಿಯುವಂತೆ ಸೂಚನೆಯನ್ನು ನೀಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಸಿಎಂ ಯಡಿಯೂರಪ್ಪ ಮಾತ್ರ ಹೈಕಮಾಂಡ್‌ ಸಂದೇಶ ಬಂದೇ ಬರುತ್ತೆ ಅಂತಿದ್ದಾರೆ.

Comments are closed.