BIG NEWS : ಪ್ರಹ್ಲಾದ್‌ ಜೋಷಿ – ಬೊಮ್ಮಾಯಿ ರಹಸ್ಯ ಮಾತುಕತೆ ..!!

ಹುಬ್ಬಳ್ಳಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಮಾತು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ರಹಸ್ಯ ಮಾತುಕತೆ ನಡೆಸುತ್ತಿದೆ. ಹೈಕಮಾಂಡ್‌ ಸಂದೇಶದ ಹಿನ್ನೆಲೆಯಲ್ಲಿ ಭೇಟಿ ಕುತೂಹಲ ಮೂಡಿಸಿದೆ.

ಸಿಎಂ ಯಡಿಯೂರಪ್ಪ ಬದಲಾವಣೆಯ ಕುರಿತು ಜುಲೈ 25ರಂದು ಬಿಜೆಪಿ ಹೈಕಮಾಂಡ್‌ ಸ್ಪಷ್ಟ ಸಂದೇಶವನ್ನು ನೀಡಲಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಹಲವು ಹೆಸರು ಗಳು ಕೇಳಿಬರುತ್ತಿದೆ. ಈ ನಡುವಲ್ಲೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರು ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿರುವ ಪ್ರಹ್ಲಾದ್‌ ಜೋಷಿ ಅವರ ನಿವಾಸಕ್ಕೆ ಭೇಟಿಯನ್ನು ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಸಿಎಂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿ ಕೊಂಡಿದ್ದಾರೆ. ಒಂದೆಡೆ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ದೆಹಲಿ ಮಟ್ಟದಲ್ಲಿ ನಾಯಕ ರನ್ನು ಭೇಟಿಯಾಗುತ್ತಿದ್ರೆ, ಇದೀಗ ಬಸವರಾಜ್‌ ಬೊಮ್ಮಾಯಿ ಅವರು ಜೋಷಿ ಮನೆಗೆ ಭೇಟಿ ನೀಡಿದ್ದಾರೆ. ಬಿಜೆಪಿಯ ಹಿರಿಯ ಮುಖಂಡರಾದ ಪ್ರಹ್ಲಾದ್‌ ಜೋಷಿ ಹಾಗೂ ಬಸವರಾಜ್‌ ಬೊಮ್ಮಾಯಿ ಅವರು ರಹಸ್ಯ ಮಾತಕತೆಯನ್ನು ನಡೆಸುತ್ತಿದ್ದಾರೆ. ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Comments are closed.