BK Hariprasad clarification : ಸಿಎಂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸೋನಿಯಾ ಗಾಂಧಿ ನಿರ್ಧಾರ ಅಂತಿಮ : ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ
ಮಂಗಳೂರು BK Hariprasad clarification : ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಎಂಟು ತಿಂಗಳು ಬಾಕಿ ಇರುವ ನಡುವೆಯೇ ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ತೀವ್ರ ಪೈಪೋಟಿ ಉಂಟಾಗಿದೆ. ಕಾಂಗ್ರೆಸ್ ಸಿಎಂ ಅಭ್ಯರ್ಥಿ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಇಬ್ಬರ ಹೆಸರೂ ಕೇಳಿ ಬರ್ತಿದೆ. ಈ ವಿಚಾರವಾಗಿ ಇಂದು ಮಂಗಳೂರಿನಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ರು.
ಕಾಂಗ್ರೆಸ್ ಪಕ್ಷ ಯಾರನ್ನು ಮುಖ್ಯಮಂತ್ರಿ ಮಾಡುತ್ತೋ ಅವರು ಮುಖ್ಯಮಂತ್ರಿ ಆಗ್ತಾರೆ .ಪಕ್ಷದಿಂದ ಆಯ್ಕೆಯಾದ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಪ್ರದಾಯ ಕಾಂಗ್ರೆಸ್ನಲ್ಲಿದೆ. ಚುನಾವಣೆಯಲ್ಲಿ ಗೆದ್ದ ಶಾಸಕರ ಬಳಿಯಲ್ಲಿ ಸೋನಿಯಾ ಗಾಂಧಿ ಅಭಿಪ್ರಾಯ ಪಡೆಯುತ್ತಾರೆ. ಎಲ್ಲರಿಂದ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರವನ್ನು ಸೋನಿಯಾ ಗಾಂಧಿಯೇ ತೆಗೆದುಕೊಳ್ತಾರೆ. ಕಾಂಗ್ರೆಸ್ನಲ್ಲಿ ಈ ಸಂಪ್ರದಾಯ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದರು.
ಈ ವರ್ಷ ಕೂಡ ಸಿಎಂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇದೇ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲಿದ್ದೇವೆ. ಈ ಬಗ್ಗೆ ಯಾರೂ ಸಂಶಯ ಪಡುವುದು ಬೇಡ. ಒಂದು ಜಾತಿ ಕಟ್ಟಿಕೊಂಡು ಜಾತಿ ಸಂಘಟನೆ ಮಾಡಬಹುದು. .ಜಾತಿ ಕಟ್ಟಿಕೊಂಡು ರಾಜಕೀಯ ಪಕ್ಷ ಕಟ್ಟುವುದಕ್ಕೆ ಸಾಧ್ಯ ಇಲ್ಲ . ಇಂತಹ ಸಂಕುಚಿತ ಮನೋಭಾವನೆ ಬಿಟ್ಟು ಬಿಡಿ ಎಂದು ಹೇಳಿದರು.
ಇನ್ನು ಇದೇ ವೇಳೆ ಸಿದ್ರಾಮೋತ್ಸವ ಕಾರ್ಯಕ್ರಮದ ಬಗ್ಗೆ ಸಚಿವ ಬಿ.ಸಿ ಪಾಟೀಲ್ ಟೀಕೆ ವಿಚಾರವಾಗಿಯೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬಿ.ಸಿ ಪಾಟೀಲ್ ಯಾವ ನೈತಿಕತೆ ಇಟ್ಕೊಂಡು ಮಾತಾಡ್ತಾರೆ ಗೊತ್ತಿಲ್ಲ .ನಾನು ಈ ವಲಸೆ ಗಿರಾಕಿಗಳ ಬಗ್ಗೆ ಮಾತನಾಡೋದಿಲ್ಲ. ಪ್ರಾಣಿ ಪಕ್ಷಿಗಳಂತೆ ವಲಸೆ ಹೋಗುವ ವಲಸೆ ಗಿರಾಕಿಗಳನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಟಾಂಗ್ ನೀಡಿದ್ರು.
ಇದನ್ನು ಓದಿ : bus stand : ಎಮ್ಮೆಯಿಂದ ಬಸ್ ತಂಗುದಾಣ ಉದ್ಘಾಟನೆ ಮಾಡಿಸಿದ ಗ್ರಾಮಸ್ಥರು :ಗದಗದಲ್ಲೊಂದು ವಿಚಿತ್ರ ಘಟನೆ
ಇದನ್ನೂ ಓದಿ : Ambulance hits Shiroor toll : ಶಿರೂರು ಟೋಲ್ ಕಂಬಕ್ಕೆ ಅಂಬ್ಯುಲೆನ್ಸ್ ಢಿಕ್ಕಿ : ಸಿಸಿ ಕ್ಯಾಮರಾದಲ್ಲಿ ಭೀಕರ ದೃಶ್ಯ ಸೆರೆ
ಇದನ್ನೂ ಓದಿ : KS Eshwarappa : ಮುಸಲ್ಮಾನರು ಎಲ್ಲಿರ್ತಾರೋ ಅಲ್ಲಿ ಸಿದ್ದರಾಮಯ್ಯ ಚುನಾವಣೆಗೆ ನಿಲ್ತಾರೆ : ಕೆ.ಎಸ್ ಈಶ್ವರಪ್ಪ ವ್ಯಂಗ್ಯ
BK Hariprasad clarification on CM candidate selection
Comments are closed.