Bombay Team : ಕಾಂಗ್ರೆಸ್ ಯಾರಾದ್ರೂ ಬರಬಹುದು: ಪರೋಕ್ಷವಾಗಿ ಬಾಂಬೇ ಟೀಂ ಆಹ್ವಾನಿಸಿದ್ರಾ ಡಿಕೆಶಿ?!

(Bombay Team)ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಅನ್ನೋ ಮಾತಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಒಂದು ಕಾಲದಲ್ಲಿ ಕಾಂಗ್ರೆಸ್ ತೊರೆದು, ಸಮ್ಮಿಶ್ರ ಸರ್ಕಾರ ಉರುಳಿಸಿದ್ದ ಬಾಂಬೇ ಟೀಂ(Bombay Team) ಗೆ ಮತ್ತೆ ಮಾತೃಸಂಸ್ಥೆಯಿಂದ ಆಹ್ವಾನ ಬಂದಿದೆ. ಹೌದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರಿಗೆ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಹಿರಂಗ ಆಹ್ವಾನ ನೀಡಿದ್ದಾರೆ. ಡಿಕೆಶಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್ ಯಾರೂ ಕೂಡ ಕಾಂಗ್ರೆಸ್ ಸದಸ್ಯತ್ವವನ್ನು ಪಡೆದು ಪಕ್ಷಕ್ಕೆ ಸೇರ್ಪಡೆಗೊಳ್ಳಬಹುದು. ಯಾರಿಗೂ ಯಾವುದೇ ನಿರ್ಬಂಧವಿಲ್ಲ ಎಂದಿದ್ದಾರೆ. ಇದರ ಜೊತೆಗೆ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿರೋ ಬಾಂಬೇ ಟೀಂ(Bombay Team) ಬಗ್ಗೆಯೂ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡವರು ಕೂಡ ಮತ್ತೆ ಮರಳಿ ಪಕ್ಷಕ್ಕೆ ಬರೋದಾದರೇ ಬರಬಹುದು. ಪಕ್ಷ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು ಎಂದಿದ್ದಾರೆ.

ಇದನ್ನೂ ಓದಿ : D.K.Shivkumar: ಡಿಕೆಶಿಗೆ ಬಿಗ್ ರಿಲೀಫ್: ತನಿಖೆ ಕೈಬಿಡುವಂತೆ ಇ.ಡಿಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

ಇದನ್ನೂ ಓದಿ : ವಿಧಾನಸಭಾ ಚುನಾವಣೆ 2023: ಬಂಟ್ವಾಳದಲ್ಲಿ ಬಿಜೆಪಿಯಿಂದ ರಾಜೇಶ್ ನಾಯಕ್ Vs ಕಾಂಗ್ರೆಸ್ ನಿಂದ ಪದ್ಮರಾಜ್, ಅಶ್ವಿನ್ ಕುಮಾರ್ ರೈ

ಡಿಕೆಶಿ ನೀಡಿದ ಈ ಹೇಳಿಕೆ ಬಿಜೆಪಿ ಹಾಗೂ ಕಾಂಗ್ರೆಸ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಡಿಕೆಶಿ ಈ ಹೇಳಿಕೆ ಮೂಲಕ ಬಿಜೆಪಿಯಲ್ಲಿರೋ ಕಾಂಗ್ರೆಸ್ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.ಇಲ್ಲಿ ಗಮನಿಸಬೇಕಾದ ಅಂಶವೆಂದರೇ, 17 ಶಾಸಕರು ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಈ ಶಾಸಕರನ್ನು ಮತ್ತೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಬಾಗಿಲು ಈ ಶಾಸಕರಿಗೆ ಶಾಶ್ವತವಾಗಿ ಮುಚ್ಚಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿಸಿಎಂ ಸಿದ್ಧರಾಮಯ್ಯ ಹೇಳಿದ್ದರು.

ಇದನ್ನೂ ಓದಿ : MLA Renukacharya : ಶಾಸಕ ರೇಣುಕಾಚಾರ್ಯ ಸೋದರನ ಮಗ ನಾಪತ್ತೆ ಪ್ರಕರಣ ; ಕಣ್ಣೀರಿಟ್ಟ ಶಾಸಕ

ಆದರೆ ಈಗ ಕಾಂಗ್ರೆಸ್ ಬಿಟ್ಟು ಹೋದ ಶಾಸಕರು ಮತ್ತೆ ಬರೋದಾದರೇ ಅರ್ಜಿ ಹಾಕಿಕೊಳ್ಳಲಿ ಎಂದು ಹೇಳಿರೋದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.ಈಗಾಗಲೇ ಚುನಾವಣೆ ಹೊತ್ತಿನಲ್ಲಿ ಬಿಜೆಪಿಯಲ್ಲಿರೋ ವಲಸೆ ಕಾಂಗ್ರೆಸ್ಸಿಗರು ಪಕ್ಷ ತೊರೆದು ಹೊರ ಬರಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಡಿಕೆಶಿ ರಾಜಕೀಯ ನಿಂತ ನೀರಲ್ಲ. ಯಾರೂ ಬೇಕಾದರೂ ಪಕ್ಷಕ್ಕೆ ಅರ್ಜಿ ಹಾಕಿಕೊಂಡು ಬರಬಹುದು ಎಂದಿರೋದು ವಲಸಿಗರಲ್ಲಿ ಹಲವರು ಮತ್ತೆ ಕಾಂಗ್ರೆಸ್ ನತ್ತ ಮುಖಮಾಡುತ್ತಾರಾ ಎಂಬ ಅನುಮಾನ ಮೂಡಿಸಿದೆ.

(Bombay Team) It has been said that no one is a permanent enemy or friend in politics. As a proof of this, the Bombay Team, which once left the Congress and brought down the coalition government, has been invited again by the parent organization. Yes, Congress leader and KPCC president DK has given an open invitation to the migrants who left Congress and joined BJP. DK’s move has caused a lot of curiosity.

Comments are closed.