CM Basavaraj Bommai : ಮತ್ತೆ ಸಂಪುಟ ವಿಸ್ತರಣೆ ಚರ್ಚೆ: ಪ್ರತ್ಯೇಕವಾಗಿ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ನೊರೆಂಟು ಭಾರಿ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುನ್ನಡೆಗೆ ಬಂದಿದೆ. ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ನಡೆದಿರುವಾಗಲೇ ಮತ್ತೊಮ್ಮೆ ಸಿಎಂ ಕ್ಯಾಬಿನೆಟ್ ವಿಸ್ತರಣೆಯ (Cabinet expansion debate) ಆಸೆ ಹೊತ್ತು ದೆಹಲಿಗೆ ದೌಡಾಯಿಸಲಿದ್ದು, ಅದಕ್ಕೂ ಮುನ್ನ ನಡೆದ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಹಾಗೂ ಬಿಎಸ್ವೈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಮಹತ್ವದ ಬೆಳವಣಿಗೆಯಲ್ಲಿ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಮಾಜಿ ಸಿಎಂ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿಎಸ್ವೈ ರನ್ನು ಭಾನುವಾರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಭೇಟಿಯಲ್ಲಿ 15 ನಿಮಿಷಗಳ ಕಾಲ ಮಹತ್ವದ ಚರ್ಚೆ ನಡೆದಿದ್ದು, ಬಿಎಸ್ವೈ ಜೊತೆ ಸಿಎಂ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚಾಗಿದ್ದು ಹಲವು ಶಾಸಕ ಹಾಗೂ ಮಾಜಿ ಸಚಿವರು ಸಂಪುಟ ಸೇರಲು ಉತ್ಸುಕರಾಗಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಹಾಗೂ ಬಿಎಸ್ವೈಭೇಟಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಇಂದು ಸಂಜೆ ಅಥವಾ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ವರಿಷ್ಠರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ವೈ ಜೊತೆ ಚರ್ಚೆ ನಡೆಸಿ, ಆಕಾಂಕ್ಷಿಗಳ ಪಟ್ಟಿ, ನೀರಿಕ್ಷೆ ಸೇರಿದಂತೆ ಹಲವು ವಿಚಾರ ಚರ್ಚಿಸಿದ್ದಾರಂತೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಶಾಸಕರು ಸಚಿವ ಸಂಪುಟ ವಿಸ್ತರಣೆಯಾಗದೇ ಇರೋದಕ್ಕೆ ಹಾಗೂ ಸಂಪುಟದಲ್ಲಿ ಸ್ಥಾನ ಸಿಗದೇ ಇರೋದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕೇವಲ ಶಾಸಕರು ಮಾತ್ರವಲ್ಲ ಹಗರಣದ ಆರೋಪದಿಂದ ಸಚಿವ ಸ್ಥಾನ ಕಳೆದುಕೊಂಡ ಬಿಜೆಪಿಯ ಹಿರಿಯ ಶಾಸಕ ಈಶ್ವರಪ್ಪ ಹಾಗೂ ಅಶ್ಲೀಲ ಸಿಡಿಯಿಂದ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿ ಕೂಡ ಸಚಿವ ಸಂಪುಟ ಸೇರ್ಪಡೆಗೆ ಕಾತುರರಾಗಿದ್ದಾರೆ‌. ಈಶ್ವರಪ್ಪ ನವರು ಈಗಾಗಲೇ ಈ ಬಗ್ಗೆ ಬಹಿರಂಗವಾಗಿಯೂ ಹೇಳಿಕೆ ನೀಡಿದ್ದು, ಆರೋಪ ಬಂದಾಗ ರಾಜೀನಾಮೆ ನೀಡಿದ್ದೆ. ಈಗ ಆರೋಪ ಮುಕ್ತನಾಗಿದ್ದೇನೆ. ಮತ್ತೆ ಸಂಪುಟ ಸೇರ್ಪಡೆಗೆ ಕಾಯುತ್ತಿದ್ದೇನೆ. ಆದರೆ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಯಾಕೆ ಮನಸ್ಸು ಮಾಡುತ್ತಿಲ್ಲ ಗೊತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ದೇಶಾದ್ಯಂತ ಗಾಂಧಿ ಜಯಂತಿ ಆಚರಣೆ : ರಾಷ್ಟ್ರಪಿತನ ಸಮಾಧಿಗೆ ನಮನ ಸಲ್ಲಿಕೆ

ಇದನ್ನೂ ಓದಿ : ಭಾರತ್ ಜೋಡೋ ಯಾತ್ರೆಗೆ ಜನರು ಬರ್ತಾ ಇಲ್ಲ, ಪೇಮೆಂಟ್ ಕೊಟ್ಟು ಕರೆತರುತ್ತಿದ್ದಾರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಆರೋಪ

ಇದನ್ನೂ ಓದಿ : ಕಾಂಗ್ರೆಸ್‌ ಅಧ್ಯಕ್ಷರಾಗ್ತಾರೆ ಮಲ್ಲಿಕಾರ್ಜುನ್‌ ಖರ್ಗೆ : ಭವಿಷ್ಯ ನುಡಿದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ

ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಈಗ ಸಿಎಂ ಮತ್ತು ಬಿಎಸ್ವೈ ಭೇಟಿ ಕುತೂಹಲ ಮೂಡಿಸಿದ್ದು, ಮೂಲಗಳ ಮಾಹಿತಿ ಪ್ರಕಾರ ಹೈಕಮಾಂಡ್ ಬಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಸಿಎಂ ಸಲಹೆ ಪಡೆದಿದ್ದಾರಂತೆ.

Cabinet expansion debate again: CM Bommai, BS Yeddyurappa discussed separately

Comments are closed.