HDD Meet CM Bommai : ದೇವೇಗೌಡರ ಕಾಲಿಗೆರಗಿ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದಾರೆ. ಈ ವೇಳೆಯಲ್ಲಿ ರಾಜ್ಯದ ಅಭಿವೃದ್ದಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದಾರೆ. ಅಲ್ಲದೇ ಮೇಕೆದಾಟು ಯೋಜನೆಯ ವಿಚಾರದಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ಮನೆಗೆ ಭೇಟಿ ನೀಡಿದ್ದ ಅವರು ದೇವೆಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆಯಲ್ಲಿ ದೇವೇಗೌಡ ರು ಬೊಮ್ಮಾಯಿ ಅವರನ್ನು ಸನ್ಮಾನಿಸಿ ಆಶೀರ್ವಾದ ಮಾಡಿದ್ದಾರೆ. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ್‌ ಬೊಮ್ಮಾಯಿ ಅವರು, ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದವನ್ನು ಪಡೆದುಕೊಂಡಿದ್ದು, ಖುಷಿಯಾಗಿದೆ ಎಂದಿದ್ದಾರೆ.

ತಾನು ಸಚಿವನಾಗಿದ್ದ ವೇಳೆಯಲ್ಲಿಯೂ ದೇವೇಗೌಡರು ಸೂಕ್ತ ಸಲಹೆ ಹಾಗೂ ಮಾರ್ಗದರ್ಶನವನ್ನು ಮಾಡಿದ್ದಾರೆ. ಮುಂದೆಯೂ ಅವರ ಮಾರ್ಗದರ್ಶನವನ್ನು ಪಡೆಯುತ್ತೇನೆ. ರಾಜ್ಯದ ಅಭಿವೃದ್ದಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇನೆ. ಮೇಕೆದಾಟು ವಿಚಾರವಾಗಿ ಸರ್ವ ಪಕ್ಷ ಸಭೆ ಪಡೆದು ಮುಂದಿನ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ.

ಈ ಹಿಂದೆ ಜನತಾದಳದಲ್ಲಿದ್ದ ಸಿಎಂ ಬೊಮ್ಮಾಯಿ ಹಾಗೂ ಜೆಡಿಎಸ್‌ ವರಿಷ್ಠ ದೇವೇಗೌಡರ ಭೇಟಿ ಇದೀಗ ಕುತೂಹಲವನ್ನು ಮೂಡಿಸಿದೆ. ಎಚ್.ಡಿ.ರೇವಣ್ಣ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.