ರಾಜಾಹುಲಿ ಆಡಳಿತ ಅಂತ್ಯ : ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಸಿದ ಯಡಿಯೂರಪ್ಪ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಸಿ.ಎಂ.ಯಡಿಯೂರಪ್ಪ ಘೋಷಣೆಯನ್ನು ಮಾಡಿದ ಬೆನ್ನಲ್ಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜ್ಯಪಾಲ ಗೆಹಲೋಟ್‌ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಸಾಧನಾ ಸಮಾವೇಶದ ವೇಳೆಯಲ್ಲಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದ ಯಡಿಯೂರಪ್ಪ, ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿಯೂ ಘೋಷಣೆ ಮಾಡಿದ್ದರು. ಮಧ್ಯಾಹ್ನ ೩ ಗಂಟೆಗೆ ರಾಜ್ಯಪಾಲರ ಭೇಟಿಗೆ ಅವಕಾಶವನ್ನು ಕೇಳಿದ್ದ ಯಡಿಯೂರಪ್ಪ ಅವರು ತರಾತುರಿಯಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ : BSY : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ : ಸಿಎಂ ಯಡಿಯೂರಪ್ಪ ಘೋಷಣೆ

ಸಿಎಂ ಯಡಿಯೂರಪ್ಪ ತಾವು ಹೈಕಮಾಂಡ್‌ ನಿರ್ಧಾರಕ್ಕೆ ಬದ್ದರಾಗಿದ್ದು, ರಾಜೀನಾಮೆಯನ್ನು ಸಲ್ಲಿಸುತ್ತೇವೆ ಎಂದಿದ್ದರು. ಅದರಂತೆಯೇ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಸಿಎಂ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದರು ಕೂಡ ಮುಂದಿನ ಮುಖ್ಯಮಂತ್ರಿಯ ನೇಮಕ ಆಗುವ ವರೆಗೆ ಸಿ.ಎಂ.ಯಡಿಯೂರಪ್ಪ ಅವರು ಕರ್ನಾಟಕದ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

Comments are closed.