ಸೋಮವಾರ, ಏಪ್ರಿಲ್ 28, 2025
HomeBreakingಸಿಎಂ ಯಡಿಯೂರಪ್ಪ ಮಾತ್ರವಲ್ಲ, ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೆ ಭಿನ್ನರ ಒತ್ತಡ

ಸಿಎಂ ಯಡಿಯೂರಪ್ಪ ಮಾತ್ರವಲ್ಲ, ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೆ ಭಿನ್ನರ ಒತ್ತಡ

- Advertisement -

ಬೆಂಗಳೂರು : ರಾಜ್ಯ ಬಿಜೆಪಿಯಲ್ಲೀಗ ಮತ್ತೆ ಸಿಎಂ ಬದಲಾವಣೆಯ ವಿಚಾರದಲ್ಲಿ ಭಿನ್ನಮತ ಏರ್ಪಟ್ಟಿದೆ. ಕೇವಲ ಸಿಎಂ ಯಡಿಯೂರಪ್ಪ ಮಾತ್ರವಲ್ಲ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೂ ಭಿನ್ನಮತೀಯ ಶಾಸಕರು ಪಟ್ಟು ಹಿಡಿದಿದ್ದಾರೆ.

ಬಿಜೆಪಿ ಹೈಕಮಾಂಡ್ ಸೇರಿದಂತೆ ಕೇಂದ್ರದ ಬಿಜೆಪಿ ನಾಯಕರು ಸದ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ ಯಡಿಯೂರಪ್ಪನವರೇ ನಮ್ಮ ನಾಯಕರು ಅಂತಾ ಹೇಳಿದ್ದಾರೆ. ಜೊತೆಗೆ ಯಡಿಯೂರಪ್ಪ ಕೂಡ ಮುಮದಿನ ಎರಡು ವರ್ಷ ನಾನೇ ಸಿಎಂ ಅಂತಾ ಹೇಳಿದ್ದು, ಉಸ್ತುವಾರಿ ಅರುಣ್ ಸಿಂಗ್ ಕೂಡ ಯಡಿಯೂರಪ್ಪ ಮಾತಿಗೆ ಧ್ವನಿಗೂಡಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದ ಮುಂದಿನ ಸಿಎಂ ಯಾರು ..? ಫೇಸ್ ಬುಕ್ ನಲ್ಲಿ ಕೇಳಿಬಂದಿದೆ ಬೆಲ್ಲದ ಹೆಸರು

ರಾಜ್ಯದಲ್ಲಿ ಯಡಿಯೂರಪ್ಪ ಬದಲಾವಣೆ ಅಸಾಧ್ಯವೆನ್ನುವ ಮಾತು ಕೇಳಿಬಂದ ಬೆನ್ನಲ್ಲೇ ಇದೀಗ ಭಿನ್ನಮತೀಯರು ಕೇವಲ ಸಿಎಂ ಯಡಿಯೂರಪ್ಪ ಮಾತ್ರವಲ್ಲ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬದಲಾವಣೆಗೆ ಬಿಗಿಪಟ್ಟು ಹಿಡಿದಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular