ಸೋಮವಾರ, ಏಪ್ರಿಲ್ 28, 2025
HomeBreakingಸದ್ಯ ಯಡಿಯೂರಪ್ಪನವರೇ ಸಿಎಂ, ನಾಳೆ ನಾಡಿದ್ದು ಗೊತ್ತಿಲ್ಲ : ಅಡ್ಡ ಗೋಡೆಯ ಮೇಲೆ ದೀಪವಿಟ್ಟ :...

ಸದ್ಯ ಯಡಿಯೂರಪ್ಪನವರೇ ಸಿಎಂ, ನಾಳೆ ನಾಡಿದ್ದು ಗೊತ್ತಿಲ್ಲ : ಅಡ್ಡ ಗೋಡೆಯ ಮೇಲೆ ದೀಪವಿಟ್ಟ : ಸಿ.ಟಿ.ರವಿ

- Advertisement -

ಮೈಸೂರು :  ರಾಜ್ಯದಲ್ಲಿ ಸದ್ಯಕ್ಕೆ ಯಡಿಯೂರಪ್ಪನವರೇ ಸಿಎಂ. ನಾಳೆ ನಾಡಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಕೇವಲ ವರ್ತಮಾನದ ಬಗ್ಗೆ ಮಾತನಾಡ ಬಲ್ಲೆ,‌ಆದರೆ‌‌ ಭವಿಷ್ಯದ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿ.ಟಿ.ರವಿ ಅವರು ನೀಡಿದ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಸರ್ವಾನುಮತ ದಿಂದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಈಗಲೂ ಯಡಿಯೂರಪ್ಪನವರೇ ಇದ್ದಾರೆ, ಮುಂದೆ ಗೊತ್ತಿಲ್ಲ.  ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ಬಹುಮತದಿಂದ ಮುಖ್ಯಮಂತ್ರಿ ಆಯ್ಕೆ ಮಾಡಬಹುದು. ಆದರೆ ಸರ್ವಾನುಮತದಿಂದ ಸಾಧ್ಯವಿಲ್ಲ, ನಾವು ಸರ್ವಾನುಮತದಿಂದ ಆಯ್ಕೆ ಮಾಡುತ್ತೇವೆ ಎಂದರು. 

ಯಾರು ದೆಹಲಿಗೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ. ಈ ವಿಚಾರ ನನಗೇನು ಗೊತ್ತಿಲ್ಲ, ನನಗೆ ಸಂಬಂಧವಿಲ್ಲ. ಬಿ.ವೈ. ವಿಜಯೇಂದ್ರ ಅವರು ಯಾವ ಕಾರಣಕ್ಕೆ ಹೋಗಿದ್ದಾರೆ ಎಂಬುದು ಸಹ ಗೊತ್ತಿಲ್ಲ. ವೈಯಕ್ತಿಕ ಕಾರಣಕ್ಕೂ ಹೋಗಿರಬಹುದು. ಸದ್ಯ ಈ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular