C.T.Ravi:ಇಂದಿರಾ ಗಾಂಧಿ ಹೆಸರಲ್ಲಿ ಕಾಂಗ್ರೆಸ್ ಬಾರ್ ತೆರೆಯಲಿ….! ಮತ್ತೊಂದು ವಿವಾದಕ್ಕೆ ಮುನ್ನುಡಿ ಬರೆದ ಸಿ.ಟಿ.ರವಿ…!!
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇಂದಿರಾ ಹೆಸರಿನಲ್ಲಿ ಬಾರ್ ಮಾಡಲಿ ನಮ್ಮದೇನು ಅಭ್ಯಂತರವಿಲ್ಲ ಎನ್ನುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ.ರವಿ, ಇಂದಿರಾ ಕ್ಯಾಂಟೀನ್ ಮಾಡಿದ್ದು ಯಾವಾಗ? ಕಾಂಗ್ರೆಸ್ ನವರಿಗೆ ಬದ್ಧತೆ ಇದ್ದರೇ ಹಿಂದೆಯೇ ಇಂದಿರಾ ಕ್ಯಾಂಟೀನ್ ಮಾಡಬೇಕಿತ್ತು. ಆಗ ಯಾಕೆ ಮಾಡಲಿಲ್ಲ? ಇಂದಿರಾ ಕ್ಯಾಂಟೀನ್ ದುಡ್ಡು ಹೊಡೆಯಲು ಮಾಡಿದ್ದಾ ಹಾಗಿದ್ದರೇ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿ ಬಾರ್ ತೆರೆಯಲಿ ಎನ್ನುವ ಮೂಲಕ ವಿವಾದಕ್ಕೆ ಮುನ್ನುಡಿ ಹಾಡಿದ್ದಾರೆ.
ಅಷ್ಟೇ ಅಲ್ಲ ನೆಹರು ಹೆಸರಿನಲ್ಲಿ ಹುಕ್ಕಾ ಬಾರ್ ಮಾಡಿ ಎಂದು ಸಿ.ಟಿ.ರವಿ ಟೀಕಿಸಿದ್ದು, ಸಿ.ಟಿ.ರವಿ ಮಾತಿಗೆ ರಾಜ್ಯದಾದ್ಯಂತ ಕಾಂಗ್ರೆಸ್ ನಾಯಕರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಿ.ಟಿ.ರವಿ ಕ್ಷಮೆಕೇಳಬೇಕೆಂಬ ಒತ್ತಾಯ ಕೇಳಿಬಂದಿದೆ.
ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾಯಿಸಿದ ವೇಳೆ ಮಾತನಾಡಿದ್ದ ಸಿ.ಟಿ.ರವಿ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿ ಅನ್ನಪೂರ್ಣ ಕ್ಯಾಂಟೀನ್ ಎಂದು ಹೆಸರಿಡುವಂತೆ ಆಗ್ರಹಿಸಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
Comments are closed.