congress doing fake allegations : ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್​ ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ : ಬಿ.ವೈ ವಿಜಯೇಂದ್ರ

ಮೈಸೂರು : congress doing fake allegations :ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಹಾಗೂ ಕಮಿಷನ್​ ದಂಧೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರ ಆರೋಪಗಳ ಸುರಿಮಳೆಗಳ ವಿರುದ್ಧ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರವನ್ನು ಹಿಡಿಯುವ ಆತುರದಲ್ಲಿದೆ. ಹೀಗಾಗಿ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ದಾಖಲೆ ಇಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ಕಾಂಗ್ರೆಸ್​ ನಾಯಕರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಯಾವುದೇ ಪುರಾವೆ ಇಲ್ಲದಿದ್ದರು ಕೂಡ ಕಾಂಗ್ರೆಸ್ಸಿಗರು ಬಿಜೆಪಿ ನಾಯಕರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್​ ಈ ರೀತಿಯ ಕೆಲಸವನ್ನು ಮಾಡುತ್ತಿದೆ. ಆದರೆ ಈ ಎಲ್ಲಾ ಪ್ರಕರಣಗಳನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು.


ಇದೇ ವೇಳೆ ಮೈಸೂರಿನಲ್ಲಿ ಚುನಾವಣಾ ತಯಾರಿ ವಿಚಾರವಾಗಿಯೂ ಮಾತನಾಡಿದ ಅವರು, ಈ ಬಾರಿ ಮೈಸೂರಿನಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಹೊಂದಿದ್ದೇವೆ. ಈ ನಿಟ್ಟಿನಲ್ಲಿ ನಾವು ಮೈಸೂರು ಭಾಗದಲ್ಲಿ ಹೆಚ್ಚೆಚ್ಚು ಜನಪರ ಕೆಲಸಗಳನ್ನು ಮಾಡಲಿದ್ದೇವೆ. ಕಾಂಗ್ರೆಸ್ಸಿಗರು ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ ಜನರು ಉತ್ತಮರ ಕೈಗೆ ಅಧಿಕಾರದ ಚುಕ್ಕಾಣಿಯನ್ನು ನೀಡುತ್ತಾರೆ ಎಂದು ಹೇಳಿದರು.

ಇದನ್ನು ಓದಿ : Asha Bhat : ನಾಯಕಿಯಿಂದ ಗಾಯಕಿ ಪಟ್ಟಕ್ಕೆ: ಇದು ರಾಬರ್ಟ್ ಬೆಡಗಿಯ ಹೊಸ ಕಹಾನಿ

ಇದನ್ನೂ ಓದಿ : Pooja Hegde : ಕಾಪು ಮಾರಿಗುಡಿಗೆ ರಾಧೇ ಶ್ಯಾಮ್ ಬೆಡಗಿ ಪೂಜಾ ಹೆಗ್ಡೆ : ಸೋಲಿನಿಂದ ಕಂಗೆಟ್ಟ ನಟಿಗೆ ದೇವರ ಅಭಯ

congress doing fake allegations against bjp leaders

Comments are closed.