ಡಿ.ಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಸೋಮವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಇನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುತ್ತಿದ್ದಂತೆಯೇ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಕನಸಿನ ಹಾದಿ ಮತ್ತಷ್ಟು ಸರಳಗೊಂಡಿದೆ. ನಿನ್ನೆ ರಾಜೀನಾಮೆಯುದ್ದಕ್ಕೂ ಸಿದ್ದರಾಮಯ್ಯ ಜೊತೆಯೇ ಇದ್ದ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಉಪಹಾರ ಕೂಟದಲ್ಲಿ ಅವರ ಕಾಲಿಗೆರಗಿ ಆಶೀರ್ವಾದವನ್ನೂ ಪಡೆದುಕೊಂಡಿದ್ದರು.
ಇನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುತ್ತಿದ್ದಂತೆಯೇ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಕನಸಿನ ಹಾದಿ ಮತ್ತಷ್ಟು ಸರಳಗೊಂಡಿದೆ. ನಿನ್ನೆ ರಾಜೀನಾಮೆಯುದ್ದಕ್ಕೂ ಸಿದ್ದರಾಮಯ್ಯ ಜೊತೆಯೇ ಇದ್ದ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಉಪಹಾರ ಕೂಟದಲ್ಲಿ ಅವರ ಕಾಲಿಗೆರಗಿ ಆಶೀರ್ವಾದವನ್ನೂ ಪಡೆದುಕೊಂಡಿದ್ದರು. ಸಿದ್ದರಾಮಯ್ಯರ ವಿದಾಯದ ಭಾಷಣ ಮುಗಿಯುತ್ತಿದ್ದಂತೆಯೇ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಮಾಧ್ಯಮಗಳ ಕಣ್ಣಿಗೆ ಭಾವಿ ಮುಖ್ಯಮಂತ್ರಿ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಾಣಿಸಿಕೊಂಡಿದ್ದು, ಅವರ ಕೈಯಲ್ಲಿ ಕೆಲ ದಾಖಲೆಗಳಿರುವುದು ಕಂಡುಬಂದಿದೆ.ಮೂಲಗಳ ಪ್ರಕಾರ ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ನೂತನ ಸಂಪುಟದ ಪಟ್ಟಿಗೆ ಹೈಕಮಾಂಡ್ನಿಂದ ಅನುಮತಿ ಪಡೆಯಲು ತೆರಳಿದ್ದಾರೆ ಎನ್ನಲಾಗಿದೆ.
Also Read: ಕೌಜಲಗಿ ಮನೆತನದ ಮೂರನೇ ತಲೆಮಾರು, ಶಾಸಕ ಮಹಾಂತೇಶ್ ಕೌಜಲಗಿಗೆ ಒಲಿಯುತ್ತಾ ಸಚಿವ ಸ್ಥಾನ ?
ಇನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸೋಮವಾರದಂದು ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ವಿಧಾನಸೌಧದ ಆವರಣದಲ್ಲಿಯೇ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ಕೂಡ ಆಗಮಿಸಲಿದೆ ಎನ್ನಲಾಗಿದೆ.
ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ಫಿಕ್ಸ್ ಆಗುತ್ತಿದ್ದಂತೆಯೇ,ಸಚಿವಾಕಾಂಕ್ಷಿಗಳ ಕನಸು ಮತ್ತೆ ಚಿಗುರೊಡೆದಿದೆ. ಡಿಕೆಶಿ ತನ್ನ ಸಂಪುಟದಲ್ಲಿ ಯಂಗಸ್ಟರ್ಗಳಿಗೆ ಅವಕಾಶ ನೀಡುವ ಚಿಂತನೆ ಹೊಂದಿದ್ದು, ಹಳೆಯ ಸಚಿವರಿಗೆ ಕೊಕ್ ನೀಡಲಿದ್ದಾರೆ ಎನ್ನಲಾಗಿದೆ. ಹೊಸಬರಿಗೆ ಹೆಚ್ಚು ಅವಕಾಶ ನೀಡುವ ನಿಲುವನ್ನು ಡಿಕೆಶಿ ಹೊಂದಿದ್ದಾರೆ. ಹೀಗಾಗಿ ಡಿ.ಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಯಾರಿಗೆಲ್ಲ ಸ್ಥಾನವಿದೆ ಎನ್ನುವುದು ಶೀಘ್ರದಲ್ಲಿಯೆ ತಿಳಿಯಲಿದೆ .
DK Shivakumars coronation time fixed He will take oath as the new Chief Minister on Monday



