DK Shivakumar : ನನ್ನ ಹೆಸರು ಕೇಳಿದರೆ ಕೆಲವರಿಗೆ ಶಕ್ತಿ ಬರುತ್ತೆ : ಡಿ.ಕೆ ಶಿವಕುಮಾರ್ ವ್ಯಂಗ್ಯ
ಬೆಳಗಾವಿ : DK Shivakumar : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪರಸ್ಪರ ಆರೋಪ – ಪ್ರತ್ಯಾರೋಪಗಳಿಗೆ ವೇದಿಕೆಯನ್ನು ಕಲ್ಪಿಸಿದೆ. ಬಿಜೆಪಿಯದ್ದು ಪರ್ಸಂಟೇಜ್ ಸರ್ಕಾರ ಎನ್ನುವುದು ಕಾಂಗ್ರೆಸ್ ಆರೋಪವಾದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಭ್ರಷ್ಟಾಚಾರಗಳು ನಡೆದಿವೆ. ಅವುಗಳ ದಾಖಲೆ ನಮ್ಮ ಬಳಿ ಇದೆ ಎಂದು ಬಿಜೆಪಿ ನಾಯಕರ ಪ್ರತ್ಯಾರೋಪವಾಗಿದೆ .
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಕಮಿಷನ್ ಚರ್ಚೆ ವಿಚಾರವಾಗಿ ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದ ಯಾವೆಲ್ಲ ಕಡೆಗಳಲ್ಲಿ ಕಮಿಷನ್ ವ್ಯವಹಾರಗಳು ನಡೆಯುತ್ತಿವೆಯೂ ಅವೆಲ್ಲವೂ ಈ ಕೂಡಲೇ ಬಂದ್ ಆಗಬೇಕು ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ ಮಹಾನಾಯಕನ ಹೆಸರು ಹೇಳಿಕೆ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಡಿಕೆಶಿ ಇದಕ್ಕೆಲ್ಲ ಮುಹೂರ್ತ, ಟೈಮ್ ಎಲ್ಲ ಏಕೆ ಬೇಕು..? ಅವರ ಕಾಲದಲ್ಲಿ ಕೆಲಸ ಆರಂಭವಾಗಿರೋದಕ್ಕೆ ದಾಖಲೆ ಇದೆ. ಮುಕ್ತವಾಗಿ ಜನರ ಮುಂದೆ ಎಲ್ಲವೂವನ್ನು ಇಡಲಿ. ಈ ಹಿಂದೆ ಜನರ ಮುಂದೆ ಎಲ್ಲಾ ಬಿಚ್ಚಿಟ್ಟಿದ್ದಾರೆ, ಇದನ್ನೂ ಕೂಡ ಬಿಚ್ಚಿಡಲಿ ಎಂದು ಟಾಂಗ್ ನೀಡಿದರು.
ಗೋಕಾಕ್ನಲ್ಲಿ ಗುತ್ತಿಗೆದಾರು ಸಹ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿದ್ದಾರೆ. ನನ್ನ ನೋಡಿದ ತಕ್ಷಣ ಕೆಲವರಿಗೆ ಖುಷಿ. ರಾಮ, ಹನುಮಾನ್ ಹೇಳಿದ್ರೆ ಕೆಲವರಿಗೆ ಶಕ್ತಿ ಬರುತ್ತದೆ. ಹಾಗೆ ನನ್ನ ಹೆಸರು ಹೇಳಿದ್ರೆ ಶಕ್ತಿ ಬರುತ್ತಿದೆ ಖುಷಿಯಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ವ್ಯಂಗ್ಯವಾಡಿದರು.
ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳ ಬಂಧನ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಎಫ್ಐಆರ್ನಲ್ಲಿರುವ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿಲ್ಲ. ಇದೊಂದು ದಪ್ಪ ಚರ್ಮದ ಸರ್ಕಾರ. ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಚಿವ ಈಶ್ವರಪ್ಪ ಪರವೇ ಬ್ಯಾಟ್ ಬೀಸುತ್ತಿದ್ದಾರೆ ಎಂದು ಹೇಳಿದರು. ಇದೇ ವೇಳೆ ಹುಬ್ಬಳ್ಳಿ ಗಲಾಟೆ ವಿಚಾರವಾಗಿಯೂ ಸ್ಪಷ್ಟನೆ ನೀಡಿದ ಅವರು ಇದಕ್ಕೂ ಕಾಂಗ್ರೆಸ್ಗೂ ಯಾವುದೇ ಸಂಬಂಧವಿಲ್ಲ ಅಂತಂದ್ರು.
ಇದನ್ನು ಓದಿ : Siddaramaiah : ಸತ್ತವರ ಪರ ಹೋರಾಟ ಮಾಡಿದರೆ ಸಣ್ಣ ವಿಚಾರವೇ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ಇದನ್ನೂ ಓದಿ : basanagowda patil yatnal : ಗೃಹ ಸಚಿವ ಜ್ಞಾನೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದ ಶಾಸಕ ಯತ್ನಾಳ್
DK Shivakumar’s outrage against BJP government
Comments are closed.