Shettar expressed anger : ಅಲ್ಪಸಂಖ್ಯಾತರ ಓಲೈಕೆಗಾಗಿ ಸಿದ್ದರಾಮಯ್ಯರಿಂದ ಸಾವರ್ಕರ್​ ವಿರೋಧ : ಶೆಟ್ಟರ್​​ ಪ್ರತಿಕ್ರಿಯೆ

ಹುಬ್ಬಳ್ಳಿ : Shettar expressed anger : ವೀರ ಸಾವರ್ಕರ್​ ವಿರುದ್ಧ ಹೇಳಿಕೆ ನೀಡಿರುವ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಮಾಜಿ ಸಿಎಂ ಜಗದೀಶ ಶೆಟ್ಟರ್​​ ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳುವ ಸಲುವಾಗಿ ಸಿದ್ದರಾಮಯ್ಯ ಈ ರೀತಿಯಾಗಿ ವೀರ ಸಾವರ್ಕರ್​ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡ್ತಿದ್ದಾರೆ ಎಂದು ಕಿಡಿಕಾರಿದರು.


ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು. ಸಿದ್ದರಾಮಯ್ಯ ಯಾವುದೋ ಒಂದು ಧರ್ಮದ ಬಗ್ಗೆ ಅತಿಯಾದ ಪ್ರೀತಿ ಇರುವುದರಿಂದ ಈ ರೀತಿಯಾಗಿ ವೀರ ಸಾವರ್ಕರ್​ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಮೊದಲು ಸಿದ್ದರಾಮಯ್ಯ ವೀರ ಸಾವರ್ಕರ್​ ಇತಿಹಾಸವನ್ನು ತಿಳಿದುಕೊಳ್ಳಬೇಕು. ಸಾವರ್ಕರ್​ ಕ್ರಾಂತಿಕಾರಿ ಹೋರಾಟ ಮಾಡಿದ್ದಕ್ಕೆ ಬ್ರಿಟೀಷರು ಸಾವರ್ಕರ್​​ಗೆ ಕಠಿಣ ಶಿಕ್ಷೆಯನ್ನು ನೀಡಿದ್ದರು . ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಸರಿಯಾಗಿ ತಿದ್ದುಕೊಳ್ಳಲಿ ಅಂತಾ ಕಿಡಿಕಾರಿದರು.


ಸಮಾಜದಲ್ಲಿ ದ್ವೇಷದ ವಾತಾವರಣವನ್ನು ನಿರ್ಮಾಣ ಮಾಡುವಂತಹ ಕೆಲಸವನ್ನು ಮೊದಲು ನಿಲ್ಲಿಸಲಿ. ಸಿದ್ದರಾಮಯ್ಯ ಮೇಲೆ ಮೊಟ್ಟೆ ಒಡೆದಿದ್ದನ್ನು ನಾನೂ ಖಂಡಿಸುತ್ತೇನೆ. ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಳ್ಳುವಂತಹ ಕಾರ್ಯವನ್ನು ಮಾಡಬಾರದು. ಅವರ ವಾಹನದ ಮೇಲೆ ಮೊಟ್ಟೆ ಎಸೆದಿದ್ದರೆ ಅಂತವರನ್ನು ಸರ್ಕಾರ ನೋಡಿಕೊಳ್ಳುತ್ತೆ. ಆದರೆ ಅದಕ್ಕೂ ಮುನ್ನ ಐದು ವರ್ಷಗಳ ಕಾಲ ರಾಜ್ಯದ ಸಿಎಂ ಆಗಿದ್ದವರು ಮೊದಲು ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳಲಿ ಅಂತಾ ಆಕ್ರೋಶ ಹೊರ ಹಾಕಿದ್ರು.

ಸಿದ್ದರಾಮಯ್ಯರ ಈ ವರ್ತನೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತೆ ಅಂತಾ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಹಗಲುಗನಸು ಕಾಣ್ತಿದ್ದಾರೆ.ಸಂಪೂರ್ಣ ರಾಷ್ಟ್ರದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸೋಲಿನ ಭೀತಿಯಿದೆ. ಪ್ರತಿಯೊಂದು ರಾಜ್ಯದಲ್ಲಿಯೂ ಕಾಂಗ್ರೆಸ್​ ಅಧಿಕಾರ ಕಳೆದುಕೊಳ್ತಿದೆ. ಕರ್ನಾಟಕದಲ್ಲಿಯೂ ಅವರು ಅಸ್ತಿತ್ವವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಹತಾಶೆಯಿಂದ ಸಿದ್ದರಾಮಯ್ಯ ಈ ರೀತಿ ಮಾತನಾಡಿದ್ದಾರೆ ಎಂದು ಜಗದೀಶ್​ ಶೆಟ್ಟರ್​ ಟಾಂಗ್​ ನೀಡಿದ್ರು.

ಇದನ್ನು ಓದಿ : Former CM Kumaraswamy : ರಾಷ್ಟ್ರೀಯ ಪಕ್ಷಗಳಿಂದಲೇ ರಾಜ್ಯದ ಶಾಂತಿಗೆ ಧಕ್ಕೆ : ಮಾಜಿ ಸಿಎಂ ಹೆಚ್​ಡಿಕೆ ಕಿಡಿ

ಇದನ್ನೂ ಓದಿ : Satish Jarakiholi : ಸಾವರ್ಕರ್​​ ಫೋಟೋ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆಯನ್ನೇ ವಿರೋಧಿಸಿದ ಸತೀಶ್​ ಜಾರಕಿಹೊಳಿ

Former CM Jagadish Shettar expressed anger against Siddaramaiah

Comments are closed.