ಸೋಮವಾರ, ಏಪ್ರಿಲ್ 28, 2025
HomepoliticsHD DeveGowda : ಸಿಎಂ ಬೊಮ್ಮಾಯಿಗೆ ದೇವೇಗೌಡರ ಬಲ : ಈ ಸರಕಾರಕ್ಕೆ ಕಷ್ಟ ಬಂದ್ರೆ...

HD DeveGowda : ಸಿಎಂ ಬೊಮ್ಮಾಯಿಗೆ ದೇವೇಗೌಡರ ಬಲ : ಈ ಸರಕಾರಕ್ಕೆ ಕಷ್ಟ ಬಂದ್ರೆ ನನ್ನ ಬೆಂಬಲವಿದೆ ಎಂದ್ರು ಎಚ್‌ಡಿಡಿ

- Advertisement -

ಬೆಂಗಳೂರು : ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರಕಾರಕ್ಕೆ ಸಂಕಷ್ಟ ಎದುರಾದ್ರೆ ನಮ್ಮ ಬೆಂಬಲವಿದೆ. ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಆಸೆಯಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ಮನೆಗಿಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಭೇಟಿ ನೀಡಿದರು. ಈ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ್‌ ಬೊಮ್ಮಾಯಿ ಅವರ ತಂದೆ ಹಾಗೂ ನಾನು ಒಟ್ಟಿಗೆ ಕೆಲಸ ಮಾಡಿದ್ದೇವೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ತೆಗೆಯುವಂತೆ ನಾವು ಹೇಳಿಲ್ಲ. ಈ ಸರಕಾರಕ್ಕೆ ನಮ್ಮಿಂದ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡಲಿ. ಒಳ್ಳೆಯ ಕೆಲಸಕ್ಕೆ ಮಾಡಿ ನಮ್ಮ ಸಂಪೂರ್ಣ ಬೆಂಬಲವಿದೆ. ಅವಧಿಗೂ ಮೊದಲೇ ನಾವು ಚುನಾವಣೆಗೆ ಹೋಗುವುದಿಲ್ಲ. ಒಂದೊಮ್ಮೆ ಸರಕಾರಕ್ಕೆ ಸಂಕಷ್ಟ ಎದುರಾದ್ರೆ ನಾವು ಸಂಪೂರ್ಣವಾಗಿ ಬೆಂಬಲ ನೀಡುತ್ತೇವೆ ಎಂದಿದ್ದಾರೆ.

ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದೇವೆಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆನ್ನಲ್ಲೇ ದೇವೇಗೌಡರು ಅಚ್ಚರಿಯ ಹೇಳಿಕೆ ನೀಡಿದ್ದು, ಬೊಮ್ಮಾಯಿ ಅವರಿಗೆ ಆನೆ ಬಲ ಬಂದಂತಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular