ರಾಜ್ಯದ ಎರಡು ಕ್ಷೇತ್ರಗಳಲ್ಲಿ ಇಂದು ಉಪಕದನ : ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ ಮತದಾರ
ಬಿಜೆಪಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಇಂದು ಆರಂಭಗೊಂಡಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ಮತಕ್ಷೇತ್ರ ಹಾಗೂ ಎಚ್.ವೈ ಮೇಟಿ ಅವರ ಅಗಲಿಕೆಯಿಂದ ತೆರವಾಗಿರುವ ಬಾಗಲಕೋಟೆ ಮತಕ್ಷೇತ್ರಗಳಲ್ಲಿ ಇಂದು ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ.
ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿಗಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಸಂಜೆ ಆರು ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 4ರಂದು ಬೈಎಲೆಕ್ಷನ್ ಮತದಾನ ಪ್ರಕ್ರಿಯೆ ನಡೆಯಲಿದೆ .
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಾರದ ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂಬ ಕೂಗು ಬಲವಾಗಿ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಕಾಂಗ್ರೆಸ್ ಶಾಮನೂರು ಮೊಮ್ಮಗ ಸಮರ್ಥ ಮಲ್ಲಿಕಾರ್ಜುನ ಶಾಮನೂರಿಗೆ ಟಿಕೆಟ್ ನೀಡಿದ್ದು ಅಲ್ಪಸಂಖ್ಯಾತರ ಮುನಿಸಿಗೆ ಕಾರಣವಾಗಿದೆ. ಹೀಗಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಾದ್ವಿಕ್ ಪೈಲ್ವಾನ್ ಅಖಾಡದಲ್ಲಿರುವುದು ಕಾಂಗ್ರೆಸ್ಗೆ ಕೊಂಚ ಪೆಟ್ಟು ನೀಡುವ ಸಾಧ್ಯತೆಯಿದೆ.ಅಸಲಿಗೆ ಸಾದ್ವಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.ಆದರೆ ಇವಿಎಂನಲ್ಲಿ ಅವರ ಹೆಸರು ಇರುವುದು ಕಾಂಗ್ರೆಸ್ಮತಬ್ಯಾಂಕ್ಗೆ ಕೊಂಚ ಸಮಸ್ಯೆ ತಂದೊಡ್ಡುವ ಸಾಧ್ಯತೆಯಿದೆ. ಸಮರ್ಥ್ ವಿರುದ್ಧ ಬಿಜೆಪಿಯ ಶ್ರೀನಿವಾಸ ದಾಸ ಕರಿಯಪ್ಪ ನೇರ ಹಣಾಹಣಿ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟೂ 25 ಅಭ್ಯರ್ಥಿಗಳು ಕಣಕ್ಕಿಳಿದಿದ್ದು ಎಲ್ಲರ ಭವಿಷ್ಯ ಇಂದು ಮತಪೆಟ್ಟಿಗೆಯಲ್ಲಿ ಭದ್ರಗೊಳ್ಳಲಿದೆ.
ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ : ಅಣ್ಣಾಮಲೈಗೆ ಕೊಕ್
ಇನ್ನು ಮಾಜಿ ಸಚಿವ ಎಚ್.ವೈ ಮೇಟಿ ನಿಧನದ ಬಳಿಕ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ಗಾಗಿ ಮೇಟಿ ಮಕ್ಕಳಲ್ಲೇ ಪ್ರಬಲ ಪೈಪೋಟಿ ಎದುರಾಗಿತ್ತು.ಕೊನೆಗೆ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಬಾಗಲಕೋಟೆಯಲ್ಲಿಯೂ ಉಮೇಶ್ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆಯಲಿದೆ. ಬಾಗಲಕೋಟೆಯಲ್ಲಿ ಒಟ್ಟೂ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎನ್ನಲಾಗಿದೆ.



