ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದು, ಈಗಾಗಲೇ ಮೊದಲ ಬಿಜೆಪಿ ಪಕ್ಷ ಅಭ್ಯರ್ಥಿಗಳ ಟಿಕೆಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆ ನಂತರ ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದೆ. ಈ ನಡುವೆ ಬಿಜೆಪಿಗೆ ಒಂದು ದೊಡ್ಡ ಹಿನ್ನಡೆಯಾಗಿದ್ದು, ಶಿವಮೊಗ್ಗದ ಶಾಸಕನಾಗಿರುವ ಕೆಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆಯುವ ಮೂಲಕ ರಾಜಕೀಯ ನಿವೃತ್ತಿ ಪಡೆದಿದ್ದಾರೆ. ಈ ನಡುವಲ್ಲೇ ಸಾಮಾಜಿಕ ಜಾಲತಾಣದಲ್ಲಿ ಬಿಎಸ್ ಯಡಿಯೂರಪ್ಪ ಹಾಗೂ ಈಶ್ವರಪ್ಪ ಫೋಟೋವೊಂದು ಸಖತ್ ವೈರಲ್ ಆಗುತ್ತಿದೆ.
ಹೌದು ಈ ವೈರಲ್ ಆದ ಪೋಟೋದಲ್ಲಿ ಯಡಿಯೂರಪ್ಪ – ಈಶ್ವರಪ್ಪ ಎನ್ನುವ ಶೀರ್ಷಿಕೆಯೊಂದಿಗೆ ಇಬ್ಬರು ಒಂದೇ ರೀತಿಯ ಬಟ್ಟೆಯನ್ನು ಹಾಕಿಕೊಂಡಿದ್ದು, ಯಡಿಯೂರಪ್ಪ ತಮ್ಮ ಎರಡು ಕೈಯನ್ನು ಜೇಬಿನೊಳಗೆ ಹಾಕಿಕೊಂಡು ನಿಂತಿದ್ದು, ಈಶ್ವರಪ್ಪ ಒಂದು ಕೋಲನ್ನು ಹಿಡಿದು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ನೋಡುಗರು ವಿವಿಧ ರೀತಿಯ ಕಾಮೆಂಟ್ನ್ನು ಮಾಡಿದ್ದಾರೆ.
ಯಡಿಯೂರಪ್ಪ – ಈಶ್ವರಪ್ಪ 😍 pic.twitter.com/wd5ra1sq0D
— 🇮🇳 Madhukumar.V.P🇮🇳 (@MadhukumarVP1) April 12, 2023
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರಿದ ಗದ್ದುಗೆ ಹಿಡಿಯಬೇಕೆಂದು ಮೂರು ರಾಜಕೀಯ ಪಕ್ಷಗಳು ಪಣತೊಟ್ಟಿವೆ. ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ರಾಜ್ಯ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತವನ್ನು ಸುಲಭವಾಗಿ ತೆಕ್ಕೆಗೆ ಹಾಕಿ ಕೊಳ್ಳಬಹುದು ಎಂದು ಎರಡು ರಾಷ್ಟ್ರೀಯ ಪಕ್ಷಗಳು ಯೋಜನೆ ರೂಪಿಸಿವೆ. ಮೂರು ಪಕ್ಷಗಳು ಈಗಾಗಲೆ ಭಾಗಶಃ ಪ್ರಚಾರ ಕಾರ್ಯವನ್ನು ಮುಗಿಸಿದ್ದು, ಕೊನೆ ಹಂತದ ಮತದಾರ ಮನವೊಲಿಕೆ ಅಣಿಯಾಗಿವೆ. ಇನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮತ್ತು ಜೆಡಿಎಸ್ 1 ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ನಾಳೆ ಎನ್ನುತ್ತಿದ್ದ ಬಿಜೆಪಿ ಕೊನೆಗೂ 189 ಅಭ್ಯರ್ಥಿಗಳ ಮೊದಲನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಮಧ್ಯೆ ಬಿಜೆಪಿ ಪಕ್ಷದ ಒಬ್ಬ ಅತ್ಯುನ್ನತ ನಾಯಕ ಶಿವಮೊಗ್ಗ ಕ್ಷೇತ್ರದ ಕೆ.ಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. “ನಾನು ಸ್ವ ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ” ಎಂದು ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಇದರ ಜೊತೆಗೆ ” ಕಳೆದ ನಲವತ್ತಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು” ಎಂದು ಹೇಳುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಇದು ಬಿಜೆಪಿ ದೊಡ್ಡ ಹೊಡೆತವಾಗಿದ್ದು, ಈಶ್ವರಪ್ಪನವರು ಚುನಾವಣೆಯಿಂದ ಹಿಂದೆ ಸರಿಯಲು ಯಾವುದೇ ನಿಖರ ಕಾರಣಗಳನ್ನು ತಿಳಿಸಿಲ್ಲ. ತಾನು ಸ್ವ ಇಚ್ಚೆಯಿಂದ ನಿವೃತ್ತಿ ಘೋಷಿಸುತ್ತಿರುವೆ ಎಂದಷ್ಟೇ ಹೇಳಿದ್ದಾರೆ ಹೊರತು ಯಾವುದೇ ಸ್ಪಷ್ಟೀಕರಣವನ್ನು ನೀಡಿಲ್ಲ. ಇದೀಗ ಅವರು ರಾಜಕೀಯ ನಿವೃತ್ತಿ ಘೋಷಣೆಗೆ ಟಿಕೆಟ್ ಸಿಗದಿರುವುದೇ ಕಾರಣ ಎಂದು ಹೇಳಲಾಗುತ್ತಿದೆ. ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗುವುದಕ್ಕೂ ಮೊದಲೇ ಚುನಾವಣೆಯಿಂದ ಹಿಂದೆ ಸರಿದಿದ್ದು, ಈ ಬಾರಿ ಚುನಾವಣೆಗೆ ಟಿಕೆಟ್ ಸಿಗಲ್ಲ ಎಂಬ ಕಾರಣಕ್ಕೆ ಅಥವಾ ಪುತ್ರನ ರಾಜಕೀಯ ಭವಿಷ್ಯವನ್ನು ಪರಿಗಣಿಸಿ ಚುನಾವಣೆಯಿಂದ ಹಿಂದೆ ಸರಿದಿರಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ : KS Eshwarappa retirement : ಚುನಾವಣಾ ರಾಜಕೀಯಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ
ವಯಸ್ಸಾಗಿರುವ ಕಾರಣಕ್ಕೆ ಈ ಬಾರಿ ಈಶ್ವರಪ್ಪನವರಿಗೆ ಟಿಕೆಟ್ ನೀಡಲಾಗುವುದು ದಿಲ್ಲ ಎನ್ನಲಾಗುತಿತ್ತು. ಇನ್ನೂ ಶಿವಮೊಗ್ಗದಿಂದ ತಮ್ಮ ಪುತ್ರ ಕಾಂತೇಶ್ಗೆ ಈಶ್ವರಪ್ಪ ಕೇಳಿದ್ದು, ಮತ್ತೊಂಡು ಕಡೆ ಅಯನೂರ ಮಂಜುನಾಥ್ ಕೂಡ ಬಿಜೆಪಿಯಿಂದ ಟಿಕೇಟ್ ಕೇಳಿದ್ದು, ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆ ಈ ಬಾರಿ ಎಲ್ಲರ ಗಮನ ಸೆಳೆದಿದೆ.
Karnataka Assembly Election 2023: BSY, Eshwarappa’s photo goes viral on social media amid election hype