ಬೆಂಗಳೂರು : karnataka legislative council : ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷವು ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಹಿಂಪಡೆಯುವ ಅವಧಿ ಮೀರುತ್ತಿದ್ದಂತೆಯೇ ಚುನಾವಣಾಧಿಕಾರಿ ಹಾಗೂ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಎಲ್ಲಾ ಏಳು ಮಂದಿ ಅಭ್ಯರ್ಥಿಗಳಿಗೆ ಅವಿರೋಧ ಆಯ್ಕೆಯ ಪ್ರಮಾಣ ಪತ್ರವನ್ನು ನೀಡಿದ್ದಾರೆ.
ಈ ಮೂಲಕ ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಹಾಗೂ ಕೇಶವ ಪ್ರಸಾದ್ ಅವಿರೋಧವಾಗಿ ಪರಿಷತ್ ಸದಸ್ಯನ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಕಾಂಗ್ರೆಸ್ನಿಂದ ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬಾರ್ ಮತ್ತು ಜೆಡಿಎಸ್ನಿಂದ ಟಿ.ಎ ಶರವಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೇ 24ರಂದು ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನಾಂಕವಾಗಿದೆ. ಮೇ 25ರಂದು ನಾಮಪತ್ರ ಪರಿಶೀಲನೆ ಹಾಗೂ ಮೇ 27ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿತ್ತು. ಇಂದು ನಾಮಪತ್ರ ವಾಪಸ್ ತೆಗೆದುಕೊಳ್ಳುವ ಅವಧಿಯು ಕೊನೆಯಾಗುತ್ತಿದ್ದಂತೆಯೇ ವಿಶಾಲಾಕ್ಷಿ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಿದ್ದಾರೆ.
ಇದನ್ನು ಓದಿ : ಚೈತ್ರಾ ಹಳ್ಳಿಕೇರಿ 25 ಕೋಟಿ ಪರಿಹಾರಕ್ಕಾಗಿ ಸುಳ್ಳು ಆರೋಪ : ನಟಿ ಪತಿ ಬಾಲಾಜಿ ಪ್ರತ್ಯಾರೋಪ
ಇದನ್ನೂ ಓದಿ : Samantha and Vijay : ಸಾಹಸ ಚಿತ್ರೀಕರಣದ ವೇಳೆ ಗಾಯಗೊಂಡ ಸಮಂತಾ ಮತ್ತು ವಿಜಯ ದೇವರಕೊಂಡ
karnataka legislative council polls all seven candidates unanimously elected
Comments are closed.