ಹಾವೇರಿ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ…! ನೀರಿನ ಟ್ಯಾಂಕ್ ಏರಿದ ಅಭಿಮಾನಿಗಳು…!!

ರಾಜ್ಯದಲ್ಲಿ ಸಿಎಂ ಬದಲಾವಣೆ ಸರ್ಕಸ್ ಬಳಿಕ  ಸಂಪುಟ ರಚನೆ ಕಸರತ್ತು ಜೋರಾಗಿದೆ. ಶಾಸಕರು ದೆಹಲಿಗೆ ದೌಡಾಯಿಸಿ ಮಂತ್ರಿ ಸ್ಥಾನಕ್ಕೆ ಲಾಭಿ ನಡೆಸಿದ್ದರೇ, ಹಾವೇರಿ ಶಾಸಕರ ಅಭಿಮಾನಿಗಳು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಶಾಸಕ ನೆಹರು ಓಲೇಕಾರ್ ಗೆ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಅಭಿಮಾನಿಗಳು ಹಾವೇರಿ ಮುನ್ಸಿಪಲ್ ಕಾರ್ಪೋರೇಷನ್ ಆವರಣದಲ್ಲಿರೋ 100 ಅಡಿ ಎತ್ತರದ ನೀರಿನ ಟ್ಯಾಂಕ್ ಏರಿ ಪ್ರತಿಭಟನೆ ನಡೆಸಿದ್ದಾರೆ.

ಹಾವೇರಿ ಜಿಲ್ಲೆಯ ಹತ್ತಿಮುತ್ತೂರು ಗ್ರಾಮದ ಚಂದ್ರಶೇಖರ್ ಹಾಗೂ  ಭೀಮನಗೌಡ್ ಪಾಟೀಲ್ ಪ್ರತಿಭಟನೆಗೆ ಮುಂದಾಗಿದ್ದು, ಶಾಸಕರಿಗೆ ಸಚಿವ ಸ್ಥಾನ ನೀಡದಿದ್ದರೇ ಟ್ಯಾಂಕ್ ನಿಂದ ಬಿದ್ದು ಸಾಯುವುದಾಗಿ ಹೆದರಿಸಿದ್ದಾರೆ.

ಬಳಿಕ ಸ್ಥಳಕ್ಕೆ ತಹಶೀಲ್ದಾರ ಗಿರೀಶ್ ಸ್ವಾದಿ ಹಾಗೂ ಪೊಲೀಸರು ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಕೆಳಕ್ಕೆ ಇಳಿಸಿದ್ದಾರೆ.  

Comments are closed.