DK Shivakumar : ‘ಮೂರು ವರ್ಷದ ಹಿಂದೆಯೇ ನಮಗೆ ಹಗ್ಗ ಹಾಕಿ ಗಲ್ಲಿಗೇರಿಸಬಹುದಿತ್ತಲ್ವಾ’ : ನಳೀನ್ ಕುಮಾರ್ ಕಟೀಲ್ಗೆ ಡಿಕೆಶಿ ತಿರುಗೇಟು
ಚಾಮರಾಜನಗರ : DK Shivakumar : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದಾರೆ. ತಮ್ಮ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ನಳೀನ್ ಕುಮಾರ್ ಕಟೀಲ್ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈಗ ಕಾಂಗ್ರೆಸ್ ತನ್ನ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಎಸಗಿದೆ ಎಂದು ಆರೋಪ ಮಾಡುವ ನಳೀನ್ ಕುಮಾರ್ ಕಟೀಲ್ ಮೂರು ವರ್ಷದಿಂದ ಯಾಕೆ ಸುಮ್ಮನಿದ್ದರು..? ಇವರ ಬಾಯಿಗೆ ಏನಾಗಿತ್ತು..? ಇಷ್ಟೊತ್ತಿಗೆ ನಮಗೆ ಹಗ್ಗ ಹಾಕಿ ಗಲ್ಲಿಗೆ ಏರಿಸಬಹುದಿತ್ತಲ್ವಾ…? ಮೂರು ವರ್ಷದಿಂದ ನಳೀನ್ ಕುಮಾರ್ ಕಟೀಲ್ ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಸದನವನ್ನು ಬಿಟ್ಟು ಪಕ್ಷದ ಭಾರತ್ ಜೊಡೋ ಯಾತ್ರೆಯಲ್ಲಿ ತೊಡಗಿಸಿಕೊಂಡಿರುವ ಬಗ್ಗೆಯೂ ಇದೇ ವೇಳೆ ಸ್ಪಷ್ಟನೆ ನೀಡಿದ ಅವರು, ಕಲಾಪ ಕರೀರಿ ಅಂತಾ ಹೇಳಿದವನು ನಾನೇ. ಸದನದಲ್ಲಿ ಮಾತನಾಡಲು ನಾವು ಬೇರೆಯವರನ್ನು ರೆಡಿ ಮಾಡಿ ಬಂದಿದ್ದೇವೆ. ಮಳೆಯಿಂದಾಗಿ ಬೆಂಗಳೂರಿನಲ್ಲಿ ಏನೇನಾಯ್ತು..? ಭ್ರಷ್ಟಾಚಾರ ಏನಾಯ್ತು ಅಂತೆಲ್ಲ ನಿನ್ನೆ ರೇಟ್ ಕಾರ್ಡ್ ಕೊಟ್ಟಿದ್ದೇವೆ. ಎಲ್ಲಾ ವಿಚಾರಗಳನ್ನು ನಾವು ಜನರ ಮುಂದೆ ಇಟ್ಟಿದ್ದೇವೆ. ಕಲಾಪ ಖಂಡಿತವಾಗಿಯೂ ಮುಖ್ಯವಾದದ್ದು. ಆದರೆ ಪಕ್ಷದ ಅಧ್ಯಕ್ಷನಾಗಿ ನನಗೆ ಭಾರತ್ ಜೋಡೋ ಯಾತ್ರೆ ಕೂಡ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಪರೀಕ್ಷೆ ಸಂದರ್ಭದಲ್ಲಿ ನಡೆದ ಅಕ್ರಮ ಹೊರ ಬಿದ್ದಿದೆ. ಕೂಡಲೇ ನಾವು ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜು ನೋಡದೇ ಕ್ರಮ ಕೈಗೊಳ್ಳುತ್ತಿದ್ದೇವೆ. ಆದರೆ ಈ ಸಿದ್ದರಾಮಯ್ಯ ತಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ನೈತಿಕತೆ ಯಾಕೆ ತೋರಿಸಿಲ್ಲ ಎಂದು ಪ್ರಶ್ನೆ ಮಾಡಿದ್ದರು.
ಇದನ್ನು ಓದಿ : India Women Vs England Women: ಇಂಗ್ಲೆಂಡ್ ವನಿತೆಯರ ವಿರುದ್ಧ ಸ್ಮೃತಿ ಮಂಧನ ಅಬ್ಬರದ ಬ್ಯಾಟಿಂಗ್, ಭಾರತಕ್ಕೆ ಭರ್ಜರಿ ಜಯ
ಇದನ್ನೂ ಓದಿ : ICC T20 World Cup India matches : ಭಾರತದ ಪಂದ್ಯಗಳು ಯಾವಾಗ, ಎಲ್ಲಿ, ಎದುರಾಳಿಗಳು ಯಾರು..? ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
KPCC President DK Shivakumar’s anger against Naleen Kumar Kateel
Comments are closed.