Minister S Angara : ಅಂಗಾರ ಸಾಕು- ಹೊಸಬರು ಬೇಕು: ಅಂಗಾರಗೆ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ

ಮಂಗಳೂರು : (Minister S Angara) ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರದಲ್ಲಿ ಸತತ ಆರು ಬಾರಿ ಶಾಸಕರಾಗಿ ಅಯ್ಕೆಯಾಗಿದ್ದ ಎಸ್. ಅಂಗಾರ ಅವರ ವಿರುದ್ದವಾಗಿ ಇದೀಗ ಬಿಜೆಪಿ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ್ದಾರೆ. ‘ಅಂಗಾರ ಸಾಕು ಹೊಸಬರು ಬೇಕು’ಎಂದು ಸಚಿವ ಅಂಗಾರ ಅವರ ಕ್ಷೇತ್ರದಲ್ಲೇ ಅಂದರೇ ಸುಳ್ಯ ಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ಬ್ಯಾನರ್ ಕಾಣಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯದಲ್ಲಿ ಸತತ ಆರು ಬಾರಿ ಶಾಸಕರಾಗಿ ಅಯ್ಕೆಯಾಗಿದ್ದ ಎಸ್. ಅಂಗಾರ ಅವರಿಗೆ ಇದೀಗ ಬಿಜೆಪಿ ಕಾರ್ಯಕರ್ತರಿಂದಲೇ ಬದಲಾವಣೆ ಕೂಗು ಕೇಳಿ ಬರುತ್ತಿದೆ. ಅಂಗಾರ ಸಾಕು- ಹೊಸಬರು ಬೇಕು ಎಂದು ಸುಳ್ಯ ಕ್ಷೇತ್ರದ ಹಲವು ಕಡೆಗಳಲ್ಲಿ ಬ್ಯಾನರ್ ಪ್ರತ್ಯಕ್ಷವಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬದಲಾವಣೆ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಈ ಬಾರಿ ಕಾರ್ಯಕರ್ತರಿಂದಲೇ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಸುಳ್ಯದಲ್ಲಿ ಈ ಬಾರಿಯ ವಿಧಾನ ಸಭೆ ಚುನಾವಣೆಗೆ ಅಭ್ಯರ್ಥಿ ಬದಲಾವಣೆ ಇದೆಯೇ ಎಂಬ ಬಗೆಯ ಪ್ರಶ್ನೆಗೆ ಉತ್ತರವಾಗಿ, “ನಾನು ಈ ತನಕ ಪಕ್ಷದಲ್ಲಿ ಯಾವುದನ್ನೂ ಕೇಳಿಲ್ಲ. ಆದರೂ ಪಕ್ಷ ತನಗೆ ಹಲವಾರು ಜವಾಬ್ದಾರಿಗಳನ್ನು ನೀಡಿದೆ. ನನಗೆ ನೀಡಿದ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿದ್ದೇನೆ. ಆದ್ದರಿಂದ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ನಾನು ಪಾಲಿಸುತ್ತೇನೆ ” ಎಂದಿದ್ದಾರೆ.

ಇದನ್ನೂ ಓದಿ : Secret behind the photo: ಉರಿಗೌಡ ನಂಜೇಗೌಡ ಕಿತ್ತಾಟಕ್ಕೆ ಬಿಗ್ ಟ್ವಿಸ್ಟ್ : ಪೋಟೋ ಹಿಂದಿನ ರಹಸ್ಯ ಬಯಲು

ಇದನ್ನೂ ಓದಿ : Amit Shah in Bangalore: ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಇದನ್ನೂ ಓದಿ : ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ : ಶ್ರೀ ವಚನಾನಂದ ಸ್ವಾಮೀಜಿ ವಿಶ್ವಾಸ

Minister S Angara: Angara is enough – new people are needed: Angara is opposed by BJP workers

Comments are closed.