ಮನರೇಗಾ ಯೋಜನೆ ಮರುಜಾರಿಗೆ ಕಾಂಗ್ರೆಸ್​ ಪ್ರತಿಭಟನೆ : ಇತ್ತ ಬಿಜೆಪಿಯಿಂದಲೂ ಪ್ರೊಟೆಸ್ಟ್​

ಅಂದಿನ ಪ್ರಧಾನಿ ಮನಮೋಹನ್​ ಸಿಂಗ್ ಅಧಿಕಾರಾವಧಿಯಲ್ಲಿ ದೇಶಾದ್ಯಂತ ಜಾರಿಗೆ ಬಂದಿದ್ದ ಮನರೇಗಾ ಯೋಜನೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಹೋರಾಟಕ್ಕೆ ಇಳಿದಿದೆ. ಇಂದು ಫ್ರೀಡಂ […]

Mnerga Cancel protest

ಅಂದಿನ ಪ್ರಧಾನಿ ಮನಮೋಹನ್​ ಸಿಂಗ್ ಅಧಿಕಾರಾವಧಿಯಲ್ಲಿ ದೇಶಾದ್ಯಂತ ಜಾರಿಗೆ ಬಂದಿದ್ದ ಮನರೇಗಾ ಯೋಜನೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಹೋರಾಟಕ್ಕೆ ಇಳಿದಿದೆ. ಇಂದು ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್​ ಬೃಹತ್​ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದೆ. ಇದರಲ್ಲಿ ಭಾಗಿಯಾಗಲು ಈಗಾಗಲೇ ಕೆ.ಸಿ ವೇಣುಗೋಪಾಲ್​ ಹಾಗೂ ರಣದೀಪ್​ ಸಿಂಗ್​ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ ನೇತೃತ್ವದಲ್ಲಿ ಬೃಹತ್​ ಪ್ರತಿಭಟನಾ ಸಭೆ ನಡೆಯಲಿದೆ.
ಇನ್ನು ಇದಾದ ಬಳಿಕ ‘ಮನರೇಗಾ ಬಚಾವ್​ ಸಂಗ್ರಾಮ’ದ ಅಡಿಯಲ್ಲಿ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಮನರೇಗಾ ಯೋಜನೆ ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಜನತೆಯ ಉದ್ಯೋಗ ಕಸಿದಿದೆ. ಆರ್ಥಿಕ ಭದ್ರತೆಗೆ ಪೆಟ್ಟು ನೀಡಿದೆ. ಕೇಂದ್ರ ಸರ್ಕಾರ ಪ್ರಸ್ತುತ ಜಾರಿಗೆ ತಂದಿರುವ ರಾಮ್​ ಜೀ ಕಾಯ್ದೆಯು ಅವೈಜ್ಞಾನಿಕವಾಗಿದೆ ಎಂದು ಕಾಂಗ್ರೆಸ್​ನ ಆರೋಪವಾಗಿದೆ.
ಇನ್ನು ಇತ್ತ ಬಿಜೆಪಿ ಕೂಡ ಇಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ.

ಇದನ್ನೂ ಓದಿ: ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ಧದ ಟೀಕೆಗೆ ಬ್ರೇಕ್!

ಕಾಂಗ್ರೆಸ್​ ನಾಯಕರು ರಾಜಭವನ ಚಲೋ ನಡೆಸಿದ್ರೆ ಬಿಜೆಪಿ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಗೆ ಮುಂದಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್​.ಅಶೋಕ್​ ಸೇರಿದಂತೆ ಬಿಜೆಪಿ ನಾಯಕರು ಇಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಶಾಸಕರ ನಡವಳಿಕೆ, ಅಬಕಾರಿ ಇಲಾಖೆಯ ಲಂಚ ಪ್ರಕರಣ, ಹದಗೆಟ್ಟ ಕಾನೂನು ಸುವ್ಯವಸ್ಥೆ ಸೇರಿದಂತೆ ಸರ್ಕಾರದ ವೈಫಲ್ಯಗಳ ವಿರುದ್ಧ ಈ ಪ್ರತಿಭಟನೆ ನಡೆಯಲಿದೆ.

Scroll to Top