siddaramotsava : ಸಿದ್ದರಾಮೋತ್ಸವಕ್ಕೆ ಬಂದಿದ್ದು ಸಿದ್ದರಾಮಯ್ಯ ಫ್ಯಾನ್ಸ್, ಕಾಂಗ್ರೆಸ್ ಸತ್ತು ಹೋಗಿದೆ : ರೇಣುಕಾಚಾರ್ಯ ವ್ಯಂಗ್ಯ
ಬೆಂಗಳೂರು : siddaramotsava : ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಸೇರಿದ ಅಪಾರ ಜನ ಬಳಗ ಎಲ್ಲೋ ಒಂದು ಕಡೆಯಲ್ಲಿ ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿರುವುದಂತೂ ಸತ್ಯ. ಹೀಗಾಗಿ ಸಿದ್ದರಾಮೋತ್ಸವ ಬೆನ್ನಲ್ಲೇ ಬಿಜೆಪಿ ಈ ಹಿಂದೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ರದ್ದು ಮಾಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೊಮ್ಮೆ ಆಯೋಜನೆ ಮಾಡುವ ಸಿದ್ಧತೆಯಲ್ಲಿದೆ. ಈ ಮೂಲಕ ರಾಜ್ಯದಲ್ಲಿ ತಾನೂ ಬಲ ಪ್ರದರ್ಶನ ಮಾಡುವ ಪ್ರಯತ್ನಲ್ಲಿದೆ. ಈ ಎಲ್ಲದರ ನಡುವೆ ಇಂದು ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಶಾಸಕ ಎಂಪಿ ರೇಣುಕಾಚಾರ್ಯ, ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದು ಕೇವಲ ಸಿದ್ದರಾಮಯ್ಯ ಅಭಿಮಾನಿಗಳು. ಇದಕ್ಕೂ ಕಾಂಗ್ರೆಸ್ ಮತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ರೇಣುಕಾಚಾರ್ಯ, ದಾವಣಗೆರೆಯಲ್ಲಿ ಅಭಿಮಾನೆಗಳೆಲ್ಲ ಸೇರಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಮಾಡಿದ್ದಾರೆ. ಇಲ್ಲಿ ಸೇರಿದ ಜನರನ್ನು ಕಂಡು ಕಾಂಗ್ರೆಸ್ನವರು ಮುಂದಿನ ಬಾರಿ ತಾವೇ ಅಧಿಕಾರಕ್ಕೆ ಬರುತ್ತೇವೆಂಬ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಮೇಲೆ ನನಗೂ ಗೌರವವಿದೆ. ಇದೇ ರೀತಿ ಗೌರವ ಇಟ್ಟುಕೊಂಡ ಅನೇಕರು ಆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಹಾಗಂದ ಮಾತ್ರಕ್ಕೆ ಅವೆಲ್ಲ ಕಾಂಗ್ರೆಸ್ ಮತಗಳಲ್ಲ. ಕಾಂಗ್ರೆಸ್ ಸತ್ತು ಹೋಗಿದೆ ಎಂದು ವ್ಯಂಗ್ಯವಾಗಿಡ್ಡಾರೆ.
ಡಿಕೆಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಲವಂತದ ಆಲಿಂಗನದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ರಾಹುಲ್ ಗಾಂಧಿಯೇ ಡಿ,ಕೆ ಶಿವಕುಮಾರ್ ಬಳಿಯಲ್ಲಿ ಸಿದ್ದರಾಮಯ್ಯರನ್ನು ಅಪ್ಪಿಕೊಳ್ಳುವಂತೆ ಸನ್ನೆ ಮಾಡಿದ್ದಾರೆ. ಇದನ್ನು ನೋಡಿದರೆ ನನಗೆ ನಗು ಬರುತ್ತದೆ. ರಾಹುಲ್ ಗಾಂಧಿ ತೀರ್ಥವನ್ನು ಮಾತ್ರೆಯಂತೆ ತೆಗೆದುಕೊಳ್ತಾರೆ. ಮೋದಿಯ ಎದುರು ರಾಹುಲ್ ಕೇವಲ ಝಿರೋ ಎಂದು ಕಾಲೆಳೆದರು.
ನಮ್ಮ ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಾಕಷ್ಟು ಜನಪರ ಯೋಜನೆಗಳನ್ನು ಪರಿಚಯಿಸಿದ್ದಾರೆ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವಕರಿಗೆ ಆದ್ಯತೆ ನೀಡಿದ್ದೇವೆ. ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಆ ಬಳಿಕ ಮತ್ತೊಮ್ಮೆ ಜನಪರ ಯೋಜನೆಗಳನ್ನು ಮನೆ ಬಾಗಲಿಗೆ ತಲುಪಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ : rashmika mandanna : ಸಿನಿಮಾ ರಂಗಕ್ಕೆ ಗುಡ್ಬೈ ಹೇಳಿ ರಾಜಕೀಯಕ್ಕೆ ಸೇರಲಿದ್ದಾರಾ ರಶ್ಮಿಕಾ ಮಂದಣ್ಣ
renukacharya criticize congress over siddaramotsava
Comments are closed.