siddaramaiah slams bjp : ಕಾಂಗ್ರೆಸ್​ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡ..!

ಮೈಸೂರು : siddaramaiah slams bjp: ಗುತ್ತಿಗೆದಾರ ಸಂತೋಷ್ ಪಾಟೀಲ್​ ಆತ್ಮಹತ್ಯೆ ಪ್ರಕರಣದ ಬಳಿಕ ರಾಜ್ಯದಲ್ಲಿ ಭ್ರಷ್ಟಾಚಾರದ ಚರ್ಚೆ ಜೋರಾಗಿದೆ. ಬಿಜೆಪಿಯದ್ದು ಪರ್ಸಂಟೇಜ್​ ಸರ್ಕಾರ ಎಂದು ಕಾಂಗ್ರೆಸ್​ ವ್ಯಂಗ್ಯವಾಡುತ್ತಿದ್ದರೆ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿಯೂ ಸಾಕಷ್ಟು ಭ್ರಷ್ಟಾಚಾರಗಳು ನಡೆದಿವೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಕಡತಗಳನ್ನು ನಾವು ಹೊರತೆಗೆಯುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹಿಂದಿನ ಅವಧಿಯ ಸರ್ಕಾರದ ಮೇಲೆ ಬಿಜೆಪಿಯ ಆರೋಪಗಳಿಗೆ ಮೈಸೂರಿನಲ್ಲಿಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್​ ನೀಡಿದ್ದಾರೆ.


ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಕಡತಗಳನ್ನು ಹೊರತೆಗೆಯುತ್ತೇವೆ ಎಂದು ಇಂದು ಹೇಳುತ್ತಿರುವ ಬಿಜೆಪಿ ನಾಯಕರೇ ಅಂದು ನಿಮ್ಮ ಬಾಯಿಯಲ್ಲಿ ಕಡುಬು ಸಿಕ್ಕಿ ಹಾಕಿಕೊಂಡಿತ್ತಾ..? ಅಥವಾ ಕಡ್ಲೆಪುರಿ ತಿನ್ನುತ್ತಿದ್ದೀರಾ..? ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಷ್ಟು ವರ್ಷಗಳು ಕಳೆದಿವೆ..?ಹಿಂದೆ ನೀವು ಕೂಡ ವಿಪಕ್ಷದಲ್ಲಿಯೇ ಇದ್ದಿರಿ ಅಲ್ಲವೇ..? ಅಂದಮೇಲೆ ಆಗೇಕೆ ನೀವು ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.


ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ತಿಳಿದ ಬಳಿಕ ಅದನ್ನು ಮುಚ್ಚಿಡುವುದು ಕೂಡ ಅಪರಾಧವೇ ಆಗಿದೆ. ಇದು ನಿಮಗೆ ತಿಳಿದರಲಿಲ್ಲವಾ…? ಈಗ ಕಾಂಗ್ರೆಸ್​ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ ಎಂದ ಕೂಡ ಕೂಡಲೇ ಈ ರೀತಿಯ ಹೇಳಿಕೆಗಳನ್ನು ನೀಡಿದ ತಕ್ಷಣ ರಾಜ್ಯದ ಜನತೆ ಅದನ್ನು ನಂಬುವುದಿಲ್ಲ. ಬಿಜೆಪಿ ನಾಯಕರ ನಡೆ ಏನು ಎನ್ನುವುದು ರಾಜ್ಯದ ಜನತೆಗೆ ಅರ್ಥವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನು ಓದಿ : Ghebreyesus On 3-day Visit To Gujarat : ಮೂರು ದಿನಗಳ ಗುಜರಾತ್​ ಪ್ರವಾಸದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ಇದನ್ನೂ ಓದಿ : Groom Arrest : ತಾಳಿ ಕಟ್ಟುವ ವೇಳೆಯಲ್ಲೇ ಅತ್ಯಾಚಾರ ಕೇಸ್‌ನಲ್ಲಿ ವರ ಅರೆಸ್ಟ್‌

siddaramaiah slams bjp govt and bjp leaders over corruption statement

Comments are closed.