ಮಾಜಿ ಸಿಎಂ ಸಿದ್ದರಾಮಯ್ಯಗೆ ಜ್ವರ : ಮಣಿಪಾಲ ಆಸ್ಪತ್ರೆಗೆ ದಾಖಲು

0

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಮೂತ್ರದ ಸೋಂಕಿನ ಈ ಹಿನ್ನೆಲೆಯಲ್ಲಿ ಅವರನ್ನು ಮಧ್ಯರಾತ್ರಿಯೇ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿದ್ದರಾಮಯ್ಯ ಅವರಿಗೆ ಕಳೆದ 15 ದಿನಗಳ ಹಿಂದೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರಿಗೆ ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ರಾತ್ರಿ 3.30ರ ಸುಮಾರಿಗೆ ಸಿದ್ದರಾಮಯ್ಯ ಅವರು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಇದಾಗಿದ್ದು, ಆತಂಕಪಡುವ ಅವಶ್ಯಕತೆಯಿಲ್ಲ ಎಂದ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ರಾತ್ರಿ ಆಸ್ಪತ್ರೆಯಲ್ಲೇ ಸಿದ್ದರಾಮಯ್ಯ ಉಳಿದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ಈಗ ನೋಡಿಕೊಳ್ಳುತ್ತಿದ್ದಾರೆ.

ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ. ಆಸ್ಪತ್ರೆಯಲ್ಲಿ ದಾಖಲಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರು ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಸದ್ಯ ಹಾಲಿ, ಮಾಜಿ ಸಿಎಂಗಳು ಸ್ಪೆಷಲ್‌ ವಾರ್ಡ್‌ನಲ್ಲಿದ್ದು ಆರೋಗ್ಯವಾಗಿದ್ದಾರೆ.

Leave A Reply

Your email address will not be published.