ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡುವುದು ಬಹಿತೇಕ ಖಚಿತವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜೀನಾಮೆಗೆ ಸೂಚನೆಯ ಮೇರೆಗೆ. ಇಂದೇ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ವಿಧಾನಪರಿಷತ್ ಸಭಾಪತಿ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಬೆನ್ನಲ್ಲೇ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ಸೂಚಿಸಿದ್ದರು. ಆದರೆ ಬಜೆಟ್ ಅದಿವೇಶನದಲ್ಲಿಯೂ ಅವಿಶ್ವಾಸ ನಿರ್ಣಯ ಮಂಡನೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರು ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದು ಖಚಿತವಾಗಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ ಪ್ರತಾಪ್ ಚಂದ್ರ ಶೆಟ್ಟಿ ಅವರು ಇಂದು ಅಥವ ನಾಳೆ ಸಭಾಪತಿ ಹುದ್ದೆಯನ್ನು ತ್ಯೆಜಿಸುವ ಸಾಧ್ಯತೆಯಿದೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ರಾಜೀನಾಮೆ ನೀಡಿದ್ರೆ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿಯಾಗಿ ಆಯ್ಕೆಯಾಗೋದು ಬಹುತೇಕ ಖಚಿತ.