ಸಂಸದ ತೇಜಸ್ವಿ ಸೂರ್ಯ ಹಾಡಿಗೆ ಮನಸೋತ ಪ್ರೇಕ್ಷಕರು

0

ಬೆಂಗಳೂರು : ಯುವ ಸಂಸದ ತೇಜಸ್ವಿ ಸೂರ್ಯ ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿದ್ರೂ ತಮ್ಮ ಕಾರ್ಯವೈಖರಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇದೀಗ ಬೆಂಗಳೂರು ಗಣೇಶೋತ್ಸವದಲ್ಲಿ ಅಣ್ಣಾವ್ರ ಹಾಡನ್ನು ಹಾಡುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದ್ದಾರೆ.

ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದ ತೇಜಸ್ವಿ ಸೂರ್ಯ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರೊಂದಿಗೆ ಪದ್ಮಭೂಷಣ ಡಾ.ರಾಜ್ ಕುಮಾರ್ ಹಾಡಿರುವ ಬಾನಿಗೊಂದು ಎಲ್ಲೆ ಎಲ್ಲಿದೆ. ನಿನ್ನಾಸೆಗೆಂದು ಕೊನೆಯಿದೆ.. ಅಂತಾ ಹಾಡುತ್ತಿದ್ರೆ ನೆರೆದಿದ್ದ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದಾರೆ.

ಇದೀಗ ಸಂಸದ ತೇಜಸ್ವಿ ಸೂರ್ಯ ವಿಜಯ ಪ್ರಕಾಶ್ ಅವರ ಜೊತೆಗೆ ಹಾಡಿರುವ ಹಾಡನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Leave A Reply

Your email address will not be published.