CM BSY : ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ : ಯಡಿಯೂರಪ್ಪ

ದೆಹಲಿ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್‌ ಸೂಚಿಸಿಲ್ಲ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರೋಧಿಗಳಿಗೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ದೆಹಲಿಯ ಕನ್ನಡ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಅನ್ನೋದು ಕೇವಲ ಗಾಳಿಮಾತು. ನಾನು ಮತ್ತೆ ಅಗಸ್ಟ್‌ನಲ್ಲಿ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಭೇಟಿ ಕೊಡುತ್ತೇನೆ, ಹೀಗಾಗಿ ಅಗಸ್ಟ್‌ ವರೆಗೂ ಸಿಎಂ ಸ್ಥಾನದಲ್ಲಿಯೇ ಯಡಿಯೂರಪ್ಪ ಮುಂದುವರಿಕೆಯಾ ಗೋದು ಖಚಿತವಾಗಿದೆ. ಅಲ್ಲದೇ ಯಡಿಯೂರಪ್ಪ ಕೂಡ ವರಿಷ್ಠರ ಭೇಟಿಯ ನಂತರ ನಿರಾಳರಾದಂತೆ ಕಂಡುಬಂದಿದ್ದಾರೆ.

ರಾಜ್ಯದಲ್ಲಿ ಯಡಿಯೂರಪ್ಪ ವಿರೋಧಿ ಪಾಳಯ ಕಳೆದ ಕೆಲ ತಿಂಗಳಿನಿಂದಲೂ ನಾಯಕತ್ವ ಬದಲಾವಣೆ ಯ ಬಗ್ಗೆ ಮಾತನಾಡುತ್ತಿದೆ. ಅದ್ರಲ್ಲೂ ಸಿಎಂ ಯಡಿಯೂರಪ್ಪಗೆ ಹೈಕಮಾಂಡ್‌ ಬುಲಾವ್‌ ನೀಡಿರೋದು ನಾಯಕತ್ವ ಬದಲಾವಣೆಯ ಮಾತಿಗೆ ರೆಕ್ಕೆಪುಕ್ಕ ಬಂದಿತ್ತು. ಇದೀಗ ದೆಹಲಿಯಲ್ಲಿ ಪಕ್ಷದ ವರಿಷ್ಠರ ಭೇಟಿ ಯ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನೀಡಿದ ಹೇಳಿಕೆ ನಾಯಕತ್ವದ ಬದಲಾವಣೆಯ ಮಾತಿಗೆ ವಿರಾಮ ಹೇಳಿದಂತಿದೆ.

ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿರುವ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಅವರನ್ನುಭೇಟಿಯಾಗಿ. ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

Comments are closed.